Wednesday, 21 September 2011
Monday, 19 September 2011
Sunday, 18 September 2011
NRI Secular Voice: Gujarat Secular activists and 2002 riot victims ar...
NRI Secular Voice: Gujarat Secular activists and 2002 riot victims ar...: From The Hindu Social activist and dancer Mallika Sarabhai being detained along with some Gujarat riot victims in Ahmedabad ahead of ...
ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಪ್ರಧಾನ ಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ ಮಾಯಾವತಿ
ಲಕ್ನೋ ( ಉತ್ತರ ಪ್ರದೇಶ ) : ದೇಶದ ಪ್ರಮುಖ ಅಲ್ಪ ಸಂಖ್ಯಾತ ಸಮುದಾಯವಾದ ಮುಸ್ಲಿಂ ಜನಾಂಗಕ್ಕೆ ಅವರ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಕುಮಾರಿ ಮಾಯಾವತಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸ್ವಾತಂತ್ರ್ಯ ಬಂದು ಅರವತ್ತನಾಲ್ಕು ವರ್ಷಗಳು ಕಳೆದಿದ್ದರೂ ಈ ಸಮುದಾಯ ಇನ್ನೂ ಹಲವು ಕ್ಷೇತ್ರಗಳಲ್ಲಿ ಪ್ರಗತಿಯನ್ನೇ ಕಂಡಿಲ್ಲ. ಈ ಸಮುದಾಯದ ಅಭಿವೃದ್ಧಿಗೆ ಮೀಸಲಾತಿ ನೀಡುವುದೊಂದೇ ಸೂಕ್ತ ಪರಿಹಾರವಾಗಿದ್ದು ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಯುಪಿಎ ಸರ್ಕಾರ ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.
Saturday, 17 September 2011
YOUR NAME BEGINS WITH ANY CHARACTER...???
Your name begins with any character??
A You like to draw laughter on the faces
B to have a hard time to trust people
Crazy C
... D fun
E loved
F People admire your
G to gentle and understanding
H to your personal appearance and Jamilan
I love Tumen
Join J
K likes to try everything new
L smile makes around you smiling
M successful
N Wise
O love to play
P sexy and attractive
Q hypocrite
R affectionate and cream
S arrogant
T and one of the best people to make mistakes
U cool
V You do not have opinion
W your imagination and a broad
X Do not tell people that you work Bahei
Y all learn from the experience of witnessing
Z likes to be the focus of the talk around you
ಇಸ್ಲಾಮ್. ಹೆಸರೇ ಹೇಳುವಂತೆ ಇಸ್ಲಾಮ್ ಶಾಂತಿಯ ಧರ್ಮವಾಗಿದೆ.
ಇಸ್ಲಾಮ್ ಎಂಬ ಅರಬಿ ಪದದ ಅರ್ಥ ಶಾಂತಿ, ಸಮರ್ಪಣೆ ಎಂದಾಗಿದೆ. ಒಬ್ಬ ವ್ಯಕ್ತಿ ತನ್ನನ್ನು ತಾನೇ ಸೃಷ್ಟಿಕರ್ತನಿಗೆ ಸಮರ್ಪಿಸುವ ಮೂಲಕ ಪಡೆಯುವ ಮನಃಶಾಂತಿಯಾಗಿದೆ ಇಸ್ಲಾಮ್. ಹೆಸರೇ ಹೇಳುವಂತೆ ಇಸ್ಲಾಮ್ ಶಾಂತಿಯ ಧರ್ಮವಾಗಿದೆ. ಹೆಚ್ಚಿನವರೂ ಅಪಾರ್ಥ ಮಾಡಿಕೊಂಡಿರುವಂತೆ ಇಸ್ಲಾಮ್ ಎಂದರೆ ಪ್ರವಾದಿ ಮುಹಮ್ಮದ್(ಸ)ರವರು ಹುಟ್ಟುಹಾಕಿದ ಹೊಸ ಧರ್ಮವಲ್ಲ. ಭೂಮಿಯ ಮೇಲೆ ಮೊಟ್ಟ ಮೊದಲು ಕಾಲೂರಿದ ಆದಿ ಮನುಷ್ಯ ಆದಮರಿಂದ ತೊಡಗಿ ಕೊನೆಯ ಪ್ರವಾದಿ ಮುಹಮ್ಮದ್(ಸ)ರವರ ತನಕ ಎಲ್ಲ ಪ್ರವಾದಿಗಳೂ ಬೋಧಿಸಿದ ಏಕೈಕ ದೈವಿಕ ಧರ್ಮವಾಗಿದೆ ಇಸ್ಲಾಮ್.
ಇಸ್ಲಾಮಿನ ಮೂಲಭೂತ ಆಧಾರ ಗ್ರಂಥಗಳು:
ಕುರ್ಆನ್ ಇಸ್ಲಾಮ್ ಧರ್ಮದ ಮೂಲಭೂತ ಆಧಾರ ಗ್ರಂಥವಾಗಿದೆ. ಸೃಷ್ಟಿಕರ್ತನಾದ ಅಲ್ಲಾಹು ಮುಹಮ್ಮದ್(ಸ)ರವರ ಮೇಲೆ ಜಿಬ್ರೀಲ್ (gabriel) ಎಂಬ ದೇವದೂತರ ಮೂಲಕ ಅವತೀರ್ಣಗೊಳಿಸಿದ ಅವನ ವಚನಗಳಾಗಿವೆ ಕುರ್ಆನ್. ಕುರ್ಆನ್ ಇಸ್ಲಾಮ್ ಧರ್ಮದ ಮೂಲಭೂತ ಪ್ರಮಾಣ ಗ್ರಂಥವಾಗಿದೆ. ಇದರ ನಂತರ ಪ್ರವಾದಿ ಮುಹಮ್ಮದ್(ಸ)ರವರ ವಚನಗಳು, ಪ್ರವೃತ್ತಿಗಳು ಮತ್ತು ಅಂಗೀಕಾರಗಳನ್ನೊಳಗೊಂಡಿರುವ ಸುನ್ನತ್ ಇಸ್ಲಾಮಿನ ಎರಡನೇ ಪ್ರಮಾಣ ಗ್ರಂಥವಾಗಿದೆ. ಇವೆರಡರ ಹೊರತು ಇಸ್ಲಾಮ್ ಧರ್ಮದಲ್ಲಿ ಮೂಲಭೂತವಾಗಿ ಆಶ್ರಯಿಸಬಹುದಾದ ಬೇರೆ ಪ್ರಮಾಣ ಗ್ರಂಥಗಳಿಲ್ಲ. ಒಬ್ಬ ವ್ಯಕ್ತಿಗೆ ಅವನ ಜನನದಿಂದ ತೊಡಗಿ ಮರಣದ ತನಕ ಪ್ರಾಯೋಗಿಕ ತತ್ವಗಳ ಆಧಾರದ ಮೇಲೆ ದೈವಿಕ ಮಾರ್ಗದರ್ಶನ ನೀಡುವ ಗ್ರಂಥಗಳಾಗಿವೆ ಕುರ್ಆನ್ ಮತ್ತು ಸುನ್ನತ್.
ಮುಹಮ್ಮದ್(ಸ):
ಮುಹಮ್ಮದ್(ಸ)ರವರು ಅಲ್ಲಾಹನ ದಾಸರೂ ಅವನ ಸಂದೇಶವಾಹಕರೂ ಆಗಿದ್ದಾರೆ. ಅವರು ಇಸ್ಲಾಮ್ ಧರ್ಮದ ಕಟ್ಟಕಡೆಯ ಪ್ರವಾದಿಯಾಗಿದ್ದಾರೆಯೇ ಹೊರತು ಏಕೈಕ ಪ್ರವಾದಿಯಲ್ಲ. ಮುಹಮ್ಮದ್(ಸ)ರವರಿಗಿಂತ ಮುಂಚೆ ನಿಯೋಗಿಸಲಾದ ಅಬ್ರಹಾಮ್, ಮೋಶೆ, ಯೇಸು ಮೊದಲಾದ ಸಹಸ್ರಾರು ಸಂಖ್ಯೆಯ ಪ್ರವಾದಿಗಳ ಪೈಕಿ ಮುಹಮ್ಮದ್(ಸ)ರವರೂ ಒಬ್ಬರಾಗಿದ್ದಾರೆ. ಮುಹಮ್ಮದ್(ಸ)ರವರನ್ನು ಪ್ರವಾದಿಯೆಂದು ಒಪ್ಪಿಕೊಳ್ಳುವಂತೆಯೇ ಅಬ್ರಹಾಮ್, ಮೋಶೆ, ಯೇಸು ಮೊದಲಾದವರನ್ನೂ ಪ್ರವಾದಿಗಳೆಂದು ಒಪ್ಪಿಕೊಳ್ಳುವುದು ಮತ್ತು ಅವರನ್ನು ಪ್ರೀತಿಸುವುದು ಮುಸ್ಲಿಮನ ಮೇಲೆ ಕಡ್ಡಾಯವಾಗಿದೆ. ಮುಹಮ್ಮದ್(ಸ)ರವರನ್ನು ಪ್ರವಾದಿಯೆಂದು ಅಂಗೀಕರಿಸುವ ವ್ಯಕ್ತಿ ಮೋಶೆ ಅಥವಾ ಯೇಸುವನ್ನು ಪ್ರವಾದಿಯೆಂದು ಅಂಗೀಕರಿಸದಿದ್ದರೆ ಅವನು ಮುಸ್ಲಿಮನಾಗುವುದು ಸಾಧ್ಯವಿಲ್ಲ.
ಇಸ್ಲಾಮ್ ಧರ್ಮದ ಆಧಾರ ಸ್ಥಂಭಗಳು:
ಇಸ್ಲಾಮ್ ಧರ್ಮಕ್ಕೆ ಐದು ಆಧಾರ ಸ್ಥಂಭಗಳಿವೆ. ಅಲ್ಲಾಹನ ಹೊರತು ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್(ಸ)ರವರು ಅವನ ಸಂದೇಶವಾಹಕರಾಗಿದ್ದಾರೆ ಎಂಬ ಸಾಕ್ಷ್ಯವಚನ ಇಸ್ಲಾಮ್ ಧರ್ಮದ ಮೊಟ್ಟಮೊದಲ ಮತ್ತು ಅತಿಪ್ರಮುಖ ಆಧಾರ ಸ್ಥಂಭವಾಗಿದೆ. ಈ ಆಧಾರ ಸ್ಥಂಭದ ಮೇಲೆ ಅವಲಂಬಿತವಾಗಿರುವ ಇತರ ನಾಲ್ಕು ಆಧಾರ ಸ್ಥಂಭಗಳಾಗಿವೆ ದಿನನಿತ್ಯ ನಿಗದಿತ ಐದು ವೇಳೆಗಳಲ್ಲಿ ನಮಾಝ್ ನಿರ್ವಹಿಸುವುದು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು, ಕಡ್ಡಾಯ ದಾನ (ಝಕಾತ್) ನೀಡುವ ಅರ್ಹತೆಯಿರುವವರು ಅದನ್ನು ನೀಡುವುದು ಮತ್ತು ಮಕ್ಕಕ್ಕೆ ತೆರಳಿ ಹಜ್ ಯಾತ್ರೆ ನಿರ್ವಹಿಸಲು ದೈಹಿಕ ಮತ್ತು ಆರ್ಥಿಕವಾಗಿ ಸಾಧ್ಯವಿರುವವರು ಅದನ್ನು ನಿರ್ವಹಿಸುವುದು. ಇಸ್ಲಾಮ್ ಧರ್ಮದ ಈ ಐದು ಆಧಾರ ಸ್ಥಂಭಗಳನ್ನೂ ತನ್ನ ಜೀವನದಲ್ಲಿ ಪಾಲಿಸಬೇಕಾದುದು ಮುಸ್ಲಿಮನ ಮೇಲೆ ಕಡ್ಡಾಯವಾಗಿದೆ. ಇವುಗಳ ಪೈಕಿ ಯಾವುದಾದರೂ ಒಂದು ಸ್ಥಂಭವನ್ನು ತೊರೆದರೂ ಅವನ ಇಸ್ಲಾಮ್ ಸ್ವೀಕಾರಾರ್ಹವಲ್ಲ ಮತ್ತು ಅವನು ಮುಸ್ಲಿಮನಾಗಿ ಉಳಿಯುವುದಿಲ್ಲ.
ಇಸ್ಲಾಮೀ ವಿಶ್ವಾಸ (ಈಮಾನ್)ದ ಆಧಾರ ಸ್ಥಂಭಗಳು:
ಇಸ್ಲಾಮೀ ವಿಶ್ವಾಸಕ್ಕೆ ಆರು ಆಧಾರ ಸ್ಥಂಭಗಳಿವೆ. ಅಲ್ಲಾಹನಲ್ಲಿ ವಿಶ್ವಾಸವಿಡುವುದು, ಅವನ ಮಲಕ್ (angel)ಗಳಲ್ಲಿ ವಿಶ್ವಾಸವಿಡುವುದು, ಅವನ ಗ್ರಂಥಗಳಲ್ಲಿ ವಿಶ್ವಾಸವಿಡುವುದು, ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವುದು, ಅಂತ್ಯದಿನದಲ್ಲಿ ವಿಶ್ವಾಸವಿಡುವುದು ಮತ್ತು ವಿಧಿಯಲ್ಲಿ -ಅದರ ಒಳಿತು ಮತ್ತು ಕೆಡುಕುಗಳಲ್ಲಿ- ವಿಶ್ವಾಸವಿಡುವುದು. ಈ ಮೇಲಿನ ಆರು ಸ್ಥಂಭಗಳಲ್ಲೂ ವಿಶ್ವಾಸವಿಡುವುದು ಮುಸ್ಲಿಮನ ಮೇಲೆ ಕಡ್ಡಾಯವಾಗಿದೆ. ಇವುಗಳ ಪೈಕಿ ಕೇವಲ ಒಂದರ ಮೇಲಿನ ವಿಶ್ವಾಸವನ್ನು ತೊರೆದರೂ ಅವನು ಮುಸ್ಲಿಮನಾಗಿ ಉಳಿಯುವುದಿಲ್ಲ.
ಇಸ್ಲಾಮ್ ಧರ್ಮದಲ್ಲಿ ಬಲಾತ್ಕಾರವಿಲ್ಲ:
ತನ್ನ ನಂಬಿಕೆಯನ್ನು ಜನರ ಮೇಲೆ ಬಲಾತ್ಕಾರವಾಗಿ ಹೇರಬೇಕೆಂದು ಇಸ್ಲಾಮ್ ಬೋಧಿಸುವುದಿಲ್ಲ. ವಸ್ತುತಃ ಪ್ರತಿಯೊಬ್ಬ ವ್ಯಕ್ತಿಗೂ ಅವನಿಗೆ ಇಷ್ಟವಾದ ಧರ್ಮವನ್ನು ಆರಿಸುವ ಸ್ವಾತಂತ್ರ್ಯವನ್ನು ಇಸ್ಲಾಮ್ ನೀಡುತ್ತದೆ. ಇಸ್ಲಾಮೀ ಚರಿತ್ರೆಯಲ್ಲಿ ನಡೆದ ಯಾವುದೇ ಯುದ್ಧವೂ ಜನರ ವಿಶ್ವಾಸ ಸ್ವಾತಂತ್ರ್ಯವನ್ನು ಹರಣ ಮಾಡುವುದಕ್ಕಾಗಿರಲಿಲ್ಲ. ಬದಲಾಗಿ ಇಸ್ಲಾಮ್ ಧರ್ಮವನ್ನು ಬಾಹ್ಯ ಆಕ್ರಮಣಗಳಿಂದ ಸಂರಕ್ಷಿಸುವ ಸಲುವಾಗಿತ್ತು. ಘಝ್ನಿ, ಘೋರಿ ಮೊದಲಾದ ದೊರೆಗಳು ನಡೆಸಿದ ಆಕ್ರಮಣಗಳು ಅವರ ಸಾಮ್ರಾಜ್ಯ ವಿಸ್ತರಣೆಯ ಸಲುವಾಗಿತ್ತೇ ಹೊರತು ಇಸ್ಲಾಮ್ ಧರ್ಮಕ್ಕಾಗಿರಲಿಲ್ಲ. ಹಾಗೆಯೇ ಇಂದು ಕೆಲವು ಜನರು ಇಸ್ಲಾಮಿನ ಹೆಸರಲ್ಲಿ ನಡೆಸುವ ಭಯೋತ್ಪಾದನಾ ಕೃತ್ಯಗಳು ಅವರ ಸ್ವಹಿತಾಸಕ್ತಿಗಳ ಸಂರಕ್ಷಣೆಗಾಗಿದೆಯೇ ಹೊರತು ಇಸ್ಲಾಮಿನ ಏಳಿಗೆಗಲ್ಲ. ಯಾಕೆಂದರೆ ಇಸ್ಲಾಮ್ ಹಿಂಸೆಯನ್ನು ಪ್ರಚೋದಿಸುವುದಿಲ್ಲ. ನಾಲ್ಕು ಕಾಲುಗಳ ಮೇಲೆ ಚಲಿಸುವ ಮೂಕ ಪ್ರಾಣಿಗಳ ಮೇಲೂ ದಯೆ ತೋರಿಸಬೇಕೆಂದು ಹೇಳಿದ ಇಸ್ಲಾಮ್ ವಿಶ್ವಾಸದ ಹೆಸರಲ್ಲಿ ಜನರ ಮಾರಣ ಹೋಮ ಮಾಡುವುದನ್ನು ಖಂಡಿತ ಸಹಿಸುವುದಿಲ್ಲ. ಆದ್ದರಿಂದ ಮುಸ್ಲಿಮರಾದ ಕೆಲವರು ತಮ್ಮ ಹಿತಕ್ಕಾಗಿ ಮಾಡುವ ಯಾವುದೇ ಕಾರ್ಯವನ್ನು ಇಸ್ಲಾಮಿನ ಮೇಲೆ ಎತ್ತಿಕಟ್ಟಿ ಶಾಂತಿಯ ಧ್ವಜವಾಹಕ ಧರ್ಮವಾದ ಇಸ್ಲಾಮನ್ನು ಅವಹೇಳನ ಮಾಡುವುದು ಖಂಡಿತ ಸಲ್ಲದು.
ವಿಶ್ವಾಸ ಮತ್ತು ಕರ್ಮ:
ಇಸ್ಲಾಮಿನಲ್ಲಿ ವಿಶ್ವಾಸ ಮತ್ತು ಕರ್ಮವು ಅವಿನಾಭಾವ ಸಂಬಂಧವನ್ನು ಹೊಂದಿವೆ. ಒಂದು ಮತ್ತೊಂದಕ್ಕೆ ಪೂರಕವಾಗಿರಬೇಕಾಗಿದೆ. ಅಂದರೆ ವಿಶ್ವಾಸವಿಲ್ಲದ ಕರ್ಮ ಅಥವಾ ಕರ್ಮವಿಲ್ಲದ ವಿಶ್ವಾಸ ಇಸ್ಲಾಮಿನಲ್ಲಿ ಸ್ವೀಕೃತವಲ್ಲ. ಇಸ್ಲಾಮೀ ವಿಶ್ವಾಸವನ್ನು ಹೊಂದಿರುವ ವ್ಯಕ್ತಿ ಅಲ್ಲಾಹನ ಎಲ್ಲ ಆದೇಶಗಳನ್ನೂ ತನ್ನ ಸಾಮರ್ಥ್ಯಕ್ಕೆ ಅನುಸಾರವಾಗಿ ಪಾಲಿಸಬೇಕಾಗಿದೆ ಮತ್ತು ಅಲ್ಲಾಹನ ಎಲ್ಲ ನಿಷೇಧಗಳಿಂದಲೂ ತನ್ನ ಸಾಮರ್ಥ್ಯಕ್ಕೆ ಅನುಸಾರವಾಗಿ ದೂರಸರಿಯಬೇಕಾಗಿದೆ. ಅಲ್ಲಾಹು ಮನುಷ್ಯರ ವಿಚಾರಣೆ ಮಾಡುವುದು ಅವರ ವಿಶ್ವಾಸ ಮತ್ತು ಕರ್ಮಗಳ ಆಧಾರದಲ್ಲಾಗಿದೆ. ನಿಷ್ಕಳಂಕವಾದ ವಿಶ್ವಾಸವನ್ನು ಹೊಂದಿದರೆ ಮಾತ್ರ ಅವನ ಕರ್ಮಗಳು ಸ್ವೀಕೃತವಾಗುತ್ತವೆ. ತೋರಿಕೆಗಾಗಿ ಮಾಡುವ ಯಾವ ಕರ್ಮಗಳೂ ಇಸ್ಲಾಮಿನಲ್ಲಿ ಸ್ವೀಕೃತವಲ್ಲ.
ವಿಶ್ವಭಾತೃತ್ವ:
ಇಸ್ಲಾಮ್ ವಿಶ್ವಭಾತೃತ್ವವನ್ನು ಪ್ರೋತ್ಸಾಹಿಸುತ್ತದೆ. ಜಗತ್ತಿನ ಒಂದು ಮೂಲೆಯಲ್ಲಿರುವ ಒಬ್ಬ ಮುಸ್ಲಿಮ್ ಜಗತ್ತಿನ ಇನ್ನೊಂದು ಮೂಲೆಯಲ್ಲಿರುವ ಇನ್ನೊಬ್ಬ ಮುಸ್ಲಿಮನ ಸಹೋದರನಾಗಿದ್ದಾನೆ. ಜಾತಿ, ಕುಲ, ವರ್ಣ, ದೇಶ, ಭಾಷೆ ಮೊದಲಾದ ಬೇಧಗಳು ಇಸ್ಲಾಮ್ ಧರ್ಮದಲ್ಲಿಲ್ಲ. ಕಷ್ಟದಲ್ಲಿರುವ ಯಾವುದೇ ವ್ಯಕ್ತಿಗೂ ಅವನ ಧರ್ಮ, ವರ್ಣ, ಭಾಷೆ, ದೇಶವನ್ನು ನೋಡದೆ ನೆರವೀಯಬೇಕೆಂದು ಇಸ್ಲಾಮ್ ಬೋಧಿಸುತ್ತದೆ. ಮಾನವೀಯ ನೆಲೆಯಲ್ಲಿ ತನ್ನ ಶತ್ರುವಿಗೂ ಉಪಕಾರ ಮಾಡಬೇಕೆಂದು ಇಸ್ಲಾಮ್ ಹೇಳುತ್ತದೆ.
ಸಮಾನತೆ:
ಇಸ್ಲಾಮ್ ಸಮಾನತೆಯನ್ನು ಬೋಧಿಸುವ ಧರ್ಮವಾಗಿದೆ. ಉಚ್ಛ ನೀಚವೆಂಬ ಬೇಧ ಇಸ್ಲಾಮಿನಲ್ಲಿಲ್ಲ. ಬಡವ ಬಲ್ಲಿದ, ಕರಿಯ ಬಿಳಿಯ ಎಂಬ ಬೇಧವೂ ಇಲ್ಲ. ಮನುಷ್ಯರೆಲ್ಲರೂ ಆದಮನ ಮಕ್ಕಳು ಎಂದು ಇಸ್ಲಾಮ್ ಹೇಳುತ್ತದೆ. ಆರಾಧನಾ ಕರ್ಮಗಳಲ್ಲಾಗಲಿ, ವ್ಯಾವಹಾರಿಕ ರಂಗಗಳಲ್ಲಾಗಲಿ ಅಥವಾ ಶಿಕ್ಷಾನಿಯಮಗಳಲ್ಲಾಗಲಿ ಇಸ್ಲಾಮ್ ಯಾರ ಮಧ್ಯೆಯೂ ಬೇಧ ಕಲ್ಪಿಸುವುದಿಲ್ಲ. ಮನುಷ್ಯನಿಗಿರುವ ದೇವಭಕ್ತಿಗೆ ಅನುಗುಣವಾಗಿ ಇಸ್ಲಾಮ್ ಅವನಿಗೆ ಶ್ರೇಷ್ಠತೆಯನ್ನು ಕಲ್ಪಿಸುತ್ತದೆ. ಇಸ್ಲಾಮಿನಲ್ಲಿ ಗಂಡು ಮತ್ತು ಹೆಣ್ಣಿನ ಮಧ್ಯೆಯೂ ಸಮಾನತೆಯಿದೆ. ಆದರೆ ಹೆಣ್ಣಿನ ದೈಹಿಕ ಪ್ರಕೃತಿಗೆ ಅನುಗುಣವಾಗಿ ಇಸ್ಲಾಮ್ ಆಕೆಗೆ ಕೆಲವು ನಿರ್ಬಂಧಗಳನ್ನು ಹೇರಿದೆ. ಆದರೆ ಹೆಣ್ಣಿನ ಮೇಲೆ ಹೇರುವ ಪುರುಷ ದಬ್ಬಾಳಿಕೆಯನ್ನು ಇಸ್ಲಾಮ್ ವಿರೋಧಿಸುತ್ತದೆ.
ಸಮಾನ ನ್ಯಾಯ:
ಇಸ್ಲಾಮ್ ಸಮಾನ ನ್ಯಾಯವನ್ನು ಎತ್ತಿಹಿಡಿಯುತ್ತದೆ. ಒಬ್ಬ ವ್ಯಕ್ತಿ ಬಡವನಾಗಿರುವ ಕಾರಣದಿಂದಲೋ ಅಥವಾ ಅವನು ಕರಿಯನಾಗಿರುವ ಕಾರಣದಿಂದಲೋ ಅವನಿಗೆ ನ್ಯಾಯ ನಿರಾಕರಿಸುವುದನ್ನು ಇಸ್ಲಾಮ್ ಬಲವಾಗಿ ವಿರೋಧಿಸುತ್ತದೆ. ನ್ಯಾಯ ಪಾಲನೆಯನ್ನು ಕಠಿಣವಾಗಿ ಬೋಧಿಸುವ ಧರ್ಮವಾಗಿದೆ ಇಸ್ಲಾಮ್. ನ್ಯಾಯ ತನ್ನ ಹೆತ್ತವರಿಗೆ, ಆಪ್ತಸಂಬಂಧಿಕರಿಗೆ ಅಥವಾ ಸ್ವತಃ ತನಗೇ ವಿರುದ್ಧವಾಗಿದ್ದರೂ ನ್ಯಾಯವನ್ನು ಎತ್ತಿ ಹಿಡಿಯಬೇಕೆಂದು ಇಸ್ಲಾಮ್ ಹೇಳುತ್ತದೆ. ಯುದ್ಧ ಮೊದಲಾದ ವಿಷಮ ಸ್ಥಿತಿಗಳಲ್ಲೂ ನ್ಯಾಯ ಪಾಲಿಸಬೇಕೆಂದು ಇಸ್ಲಾಮ್ ಬೋಧಿಸುತ್ತದೆ.
ವಿವಾಹ ಮತ್ತು ದಾಂಪತ್ಯ:
ಇಸ್ಲಾಮಿನಲ್ಲಿ ವಿವಾಹವೆಂದರೆ ಅದೊಂದು ಬಲವಾದ ಕರಾರಾಗಿದೆ. ವಿವಾಹವಾಗುವಾಗ ವರದಕ್ಷಿಣೆ ಪಡೆಯುವುದನ್ನು ಇಸ್ಲಾಮ್ ವಿರೋಧಿಸಿದೆ. ಆದರೆ ವಧುದಕ್ಷಿಣೆ (ಮಹ್ರ್) ನೀಡುವುದನ್ನು ಕಡ್ಡಾಯಗೊಳಿಸಿದೆ. ಕನ್ಯೆಯನ್ನು ವಿವಾಹ ಮಾಡಿಕೊಡುವಾಗ ಅದಕ್ಕೆ ಆಕೆ ಅನುಮತಿ ನೀಡುವುದು ಕಡ್ಡಾಯವಾಗಿದೆ. ವಿವಾಹದಲ್ಲಾಗಲಿ ಅಥವಾ ಇತರ ಯಾವುದೇ ವಿಷಯಗಳಲ್ಲಾಗಲಿ ದುಂದುವೆಚ್ಚ ಮಾಡುವುದನ್ನು ಇಸ್ಲಾಮ್ ವಿರೋಧಿಸಿದೆ. ದಂಪತಿಗಳು ಪರಸ್ಪರ ಕಷ್ಟಸುಖಗಳಲ್ಲಿ ಭಾಗಿಯಾಗಬೇಕೆಂದು ಮತ್ತು ಒಬ್ಬರನ್ನೊಬ್ಬರು ಅರಿತುಕೊಂಡು ಜೀವನ ನಡೆಸಬೇಕೆಂದು ಇಸ್ಲಾಮ್ ಬೋಧಿಸುತ್ತದೆ. ದಂಪತಿಗಳಲ್ಲಿ ಪರಸ್ಪರ ವಿರಸ ಮೂಡಿಸುವಂತಹ ಎಲ್ಲ ದ್ವಾರಗಳನ್ನು ಇಸ್ಲಾಮ್ ಮುಚ್ಚಿಹಾಕಿದೆ. ತನ್ನ ಪತ್ನಿಯ ಬಾಯಿಯಲ್ಲಿ ಹಾಕುವ ಒಂದು ತುತ್ತು ಅನ್ನಕ್ಕೂ ಪ್ರತಿಫಲವಿದೆಯೆಂದು ಇಸ್ಲಾಮ್ ಘೋಷಿಸುತ್ತದೆ. ಪತ್ನಿಯೊಂದಿಗೆ ಶಿಷ್ಟಾಚಾರದೊಂದಿಗೆ ವರ್ತಿಸುವವನೇ ನಿಜವಾದ ಪುರುಷ ಮತ್ತು ಪತಿಯ ಆಜ್ಞೆಗಳಿಗೆ ಶಿರಸಾವಹಿಸುವುದು ಹೆಣ್ಣಿನ ಮೇಲೆ ಕಡ್ಡಾಯವಾಗಿದೆಯೆಂದು ಇಸ್ಲಾಮ್ ಬೋಧಿಸುತ್ತದೆ.
ಕುಟುಂಬ:
ಇಸ್ಲಾಮೀ ಕುಟುಂಬದ ಮೇಲೆ ಇಸ್ಲಾಮೀ ಸಮಾಜ ಸ್ಥಾಪನೆಗೊಳ್ಳುವುದರಿಂದ ಕುಟುಂಬಕ್ಕೆ ಇಸ್ಲಾಮ್ ಮಹತ್ವವಾದ ಸ್ಥಾನವನ್ನು ನೀಡಿದೆ. ಕುಟುಂಬ ಸಂಬಂಧ ಕಡಿಯುವುದನ್ನು ಇಸ್ಲಾಮ್ ಘೋರ ಪಾಪವಾಗಿ ಪರಿಗಣಿಸುತ್ತದೆ. ಗಂಡು ಮತ್ತು ಹೆಣ್ಣು ಕುಟುಂಬದ ಪಾಲುದಾರರಾಗಿದ್ದರೂ ಕುಟುಂಬದ ನಾಯಕ ಸ್ಥಾನದ ಹೊಣೆಯನ್ನು ಇಸ್ಲಾಮ್ ಪುರುಷನ ಮೇಲೆ ವಹಿಸಿಕೊಟ್ಟಿದೆ. ಆದ್ದರಿಂದ ಕುಟುಂಬದ ಪಾಲನೆ ಪೋಷಣೆಯ ಹೊಣೆ ಪುರುಷನ ಮೇಲಿದೆ. ಕುಟುಂಬದ ವಿಷಯದಲ್ಲಿ ತೆಗೆಯಲಾಗುವ ಯಾವುದೇ ನಿರ್ಣಯವೂ ಗಂಡು ಮತ್ತು ಹೆಣ್ಣಿನ ಪಾಲುದಾರಿಕೆಯಲ್ಲಿರಬೇಕೇ ಹೊರತು ಗಂಡಿನ ಏಕಸ್ವಾಮ್ಯ ಮತ್ತು ದಬ್ಬಾಳಿಕೆಯನ್ನು ಇಸ್ಲಾಮ್ ಅಂಗೀಕರಿಸುವುದಿಲ್ಲ.
ಹೆತ್ತವರು ಮತ್ತು ಮಕ್ಕಳು:
ಹೆತ್ತವರನ್ನು ಪ್ರೀತಿಸುವುದು ಮತ್ತು ಅವರ ವೃದ್ಧಾಪ್ಯದಲ್ಲಿ ಅವರಿಗೆ ಆಸರೆಯಾಗಿ ನಿಲ್ಲುವುದು ಇಸ್ಲಾಮಿನಲ್ಲಿ ಕಡ್ಡಾಯವಾಗಿದೆ. ಹೆತ್ತವರ ಮಾತಿಗೆ ಎದುರುತ್ತರ ಕೊಡುವುದು ಅಥವಾ ಕನಿಷ್ಟ ಛೇ ಎಂಬ ಮಾತನ್ನು ಬಳಸುವುದು ನಿಷಿದ್ಧವಾಗಿದೆ. ಮಾತೆಯ ಕಾಲಡಿಯಲ್ಲಿ ಸ್ವರ್ಗವಿದೆಯೆಂದು ಇಸ್ಲಾಮ್ ಬೋಧಿಸುತ್ತದೆ. ಹೆತ್ತವರ ತೃಪ್ತಿಯ ವಿನಾ ಸ್ವರ್ಗಪ್ರವೇಶ ಸಾಧ್ಯವಿಲ್ಲವೆಂದು ಇಸ್ಲಾಮ್ ಹೇಳುತ್ತದೆ. ಮಕ್ಕಳನ್ನು ಪ್ರೀತಿಸಬೇಕು ಮತ್ತು ಅವರ ಮಧ್ಯೆ ಸಮಾನ ನ್ಯಾಯ ಪಾಲಿಸಬೇಕೆಂದು ಇಸ್ಲಾಮ್ ಹೇಳುತ್ತದೆ. ಬಡತನವನ್ನು ಭಯಪಟ್ಟು ಮಕ್ಕಳನ್ನು ಹತ್ಯೆ ಮಾಡುವುದನ್ನು ಇಸ್ಲಾಮ್ ಘೋರ ಪಾಪವಾಗಿ ಪರಿಗಣಿಸುತ್ತದೆ. ಭ್ರೂಣಹತ್ಯೆಯನ್ನು ಇಸ್ಲಾಮ್ ನಿಷಿದ್ಧಗೊಳಿಸಿದೆ. ಇಬ್ಬರು ಹೆಣ್ಮಕ್ಕಳನ್ನು ಚೆನ್ನಾಗಿ ಬೆಳೆಸಿ, ಅವರಿಗೆ ಗೌರವಾರ್ಹವಾದ ವಿದ್ಯೆಯನ್ನು ನೀಡಿ, ವಿವಾಹ ಮಾಡಿಕೊಡುವಾತನಿಗೆ ಸ್ವರ್ಗವಿದೆಯೆಂದು ಇಸ್ಲಾಮ್ ಘೋಷಿಸುತ್ತದೆ.
ಸಮಾಜ:
ಸಮಾಜದ ನೆಮ್ಮದಿಯನ್ನು ಕೆಡಿಸುವ ಮತ್ತು ಸಾಮಾಜಿಕ ಅಧಃಪತನಕ್ಕೆ ಕಾರಣವಾಗುವ ಎಲ್ಲ ಅನೈತಿಕ ಪ್ರವೃತ್ತಿಗಳನ್ನು ಇಸ್ಲಾಮ್ ನಿಷಿದ್ಧಗೊಳಿಸಿದೆ. ಮದ್ಯಪಾನ ಮೊದಲಾದ ಅಮಲು ಪದಾರ್ಥಗಳ ಸೇವನೆ, ವ್ಯಭಿಚಾರ, ವಿವಾಹಪೂರ್ವ ಲೈಂಗಿಕತೆ, ಸಲಿಂಗರತಿ, ಅನ್ಯರನ್ನು ದೂಷಣೆ ಮಾಡುವುದು, ಚಾಡಿ ಹೇಳುವುದು ಮುಂತಾದ ಎಲ್ಲ ದುರ್ಗುಣಗಳನ್ನೂ ಇಸ್ಲಾಮ್ ನಿಷಿದ್ಧಗೊಳಿಸಿದೆ. ಇವೆಲ್ಲವೂ ಕುಟುಂಬವನ್ನು ಛಿದ್ರಗೊಳಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುತ್ತದೆ. ಹಾಗೆಯೇ ಸಾಮಾಜಿಕ ಪಿಡುಗುಗಳಾದ ಕಳ್ಳತನ, ದರೋಡೆ, ದಬ್ಬಾಳಿಕೆ, ಅನ್ಯಾಯ, ಅಕ್ರಮ ಇತ್ಯಾದಿಗಳನ್ನು ನಿರ್ನಾಮಗೊಳಿಸುವ ಮಾರ್ಗಗಳನ್ನು ಕಲಿಸಿಕೊಡುತ್ತದೆ. ಸಮಾಜದ ಆರೋಗ್ಯಪೂರ್ಣ ನೆಲೆನಿಲ್ಲುವಿಕೆಗಾಗಿ ಅಗತ್ಯವಿರುವ ಎಲ್ಲ ಮಾರ್ಗನಿರ್ದೇಶನಗಳನ್ನು ಇಸ್ಲಾಮ್ ನೀಡಿದೆ. ಸಾಮಾಜಿಕ ಹಿತಕ್ಕಾಗಿ ಮಾಡುವ ಯಾವುದೇ ಕರ್ಮಗಳು ಇಸ್ಲಾಮಿನಲ್ಲಿ ಪ್ರತಿಫಲಾರ್ಹವಾಗಿವೆ.
ನೆರೆಹೊರೆ:
ನೆರೆಹೊರೆ ಸಂಬಂಧಕ್ಕೆ ಇಸ್ಲಾಮ್ ಬಹಳ ಮಹತ್ವ ನೀಡಿದೆ. ನೆರೆಯಲ್ಲಿರುವ ವ್ಯಕ್ತಿ ಯಾವ ಜಾತಿಗೆ ಸೇರಿದವನಾದರೂ ಅವನೊಂದಿಗೆ ಪಾಲಿಸಬೇಕಾದ ಶಿಷ್ಟಾಚಾರಗಳು, ತನ್ನಿಂದ ಅವನಿಗೆ ದೊರೆಯಬೇಕಾದ ಸುರಕ್ಷತೆಯನ್ನು ದೃಢೀಕರಿಸುವುದು, ಅವನ ಕಷ್ಟಸುಖಗಳಲ್ಲಿ ಪಾಲ್ಗೊಳ್ಳುವುದು ಮೊದಲಾದ ನಿಯಮ ನಿರ್ದೇಶನಗಳನ್ನು ಇಸ್ಲಾಮ್ ನೀಡಿದೆ. ನೆರೆಮನೆಯಾತ ಹಸಿದಿರುವಾಗ ಅವನ ಕಷ್ಟವನ್ನು ವಿಚಾರಿಸದೆ ನೆಮ್ಮದಿಯಾಗಿರುವುದನ್ನು ಇಸ್ಲಾಮ್ ವಿರೋಧಿಸುತ್ತದೆ.
ಆರ್ಥಿಕತೆ:
ಆರ್ಥಿಕ ಸಂಪಾದನೆಗಾಗಿ ವಕ್ರ ಮಾರ್ಗಗಳ ಮೊರೆ ಹೋಗುವುದನ್ನು ಇಸ್ಲಾಮ್ ನಿಷಿದ್ಧಗೊಳಿಸಿದೆ. ಕಳ್ಳತನ, ಬಡ್ಡಿ, ಜುಗಾರಿ, ಕಾಳಸಂತೆ, ಮೋಸ, ವಂಚನೆ ಇತ್ಯಾದಿಗಳನ್ನು ಇಸ್ಲಾಮ್ ವಿರೋಧಿಸಿದೆ. ನ್ಯಾಯಸಮ್ಮತ ಮಾರ್ಗಗಳ ಮೂಲಕ ಸಂಪಾದಿಸಿದ ಹಣದಿಂದ ಉಣ್ಣುವ ಆಹಾರವೇ ಶ್ರೇಷ್ಠ ಆಹಾರವೆಂದು ಇಸ್ಲಾಮ್ ಹೇಳುತ್ತದೆ. ಅನ್ಯರ ಮುಂದೆ ಕೈಚಾಚುವುದನ್ನು ಇಸ್ಲಾಮ್ ಪ್ರೋತ್ಸಾಹಿಸುವುದಿಲ್ಲ. ಪರಿಶ್ರಮಪಟ್ಟು ಕುಟುಂಬವನ್ನು ಪೋಷಿಸುವುದು ಅನ್ಯರ ಮುಂದೆ ಕೈಚಾಚುವುದಕ್ಕಿಂತಲೂ ಶ್ರೇಷ್ಠವೆಂದು ಇಸ್ಲಾಮ್ ಹೇಳುತ್ತದೆ.
ಪರಧರ್ಮ ಸಹಿಷ್ಣುತೆ:
ಪರಧರ್ಮ ದೂಷಣೆಯನ್ನು ಇಸ್ಲಾಮ್ ವಿರೋಧಿಸುತ್ತದೆ. ಮಾನವೀಯ ನೆಲೆಯಲ್ಲಿ ಅನ್ಯಧರ್ಮೀಯರ ಕಷ್ಟಸುಖಗಳಲ್ಲಿ ಭಾಗಿಯಾಗುವುದು, ಅವರ ಏಳಿಗೆಯನ್ನು ಬಯಸುವುದು, ಅವರೊಂದಿಗೆ ಆಪ್ತ ಸಂಬಂಧ ಹೊಂದುವುದು ಇತ್ಯಾದಿಗಳನ್ನು ಇಸ್ಲಾಮ್ ವಿರೋಧಿಸುವುದಿಲ್ಲ. ಆದರೆ ಧಾರ್ಮಿಕ ನೆಲೆಯಲ್ಲಿ ಅವರೊಂದಿಗೆ ಬೆರೆಯುವುದು, ಅಂದರೆ ಅವರ ಪೂಜೆ ಪುನಸ್ಕಾರಗಳಲ್ಲಿ ಪಾಲ್ಗೊಳ್ಳುವುದು, ಅವರ ಧಾರ್ಮಿಕ ಉತ್ಸವಗಳಲ್ಲಿ ಭಾಗಿಯಾಗುವುದು, ಅವರ ಸಂಪ್ರದಾಯಗಳನ್ನು ಅನುಕರಿಸುವುದು ಇತ್ಯಾದಿಗಳನ್ನು ಇಸ್ಲಾಮ್ ವಿರೋಧಿಸುತ್ತದೆ. ಧರ್ಮದ ಬಗ್ಗೆ ಪರಸ್ಪರ ಸಂವಾದ ಮಾಡುವುದನ್ನು ಇಸ್ಲಾಮ್ ಪ್ರೋತ್ಸಾಹಿಸುತ್ತದೆ. ಆದರೆ ಧರ್ಮದ ಹೆಸರಲ್ಲಿ ಜಗಳವಾಡುವುದನ್ನು ವಿರೋಧಿಸುತ್ತದೆ.
ಕಾರ್ಮಿಕ ನೀತಿ:
ಕಾರ್ಮಿಕರ ಹಕ್ಕುಗಳನ್ನು ಎತ್ತಿಹಿಡಿದ ಧರ್ಮವಾಗಿದೆ ಇಸ್ಲಾಮ್. ಕೂಲಿಯಾಳಿನ ಬೆವರು ಆರುವುದಕ್ಕೆ ಮೊದಲೇ ಅವನ ವೇತನ ಕೊಟ್ಟುಬಿಡಬೇಕೆಂದು ಇಸ್ಲಾಮ್ ಬೋಧಿಸುತ್ತದೆ. ವೇತನಕ್ಕೆ ಓರ್ವ ವ್ಯಕ್ತಿಯನ್ನು ನಿಶ್ಚಯಿಸಿದರೆ ಅವನಿಗೆ ಸಾಧ್ಯವಾಗದ ಕೆಲಸವನ್ನು ಅವನಿಂದ ಮಾಡಿಸಕೂಡದು, ಹಾಗೆ ಮಾಡಿಸುವುದಾದರೆ ಅವನಿಗೆ ಅದರಲ್ಲಿ ನೆರವೀಯಬೇಕೆಂದು ಇಸ್ಲಾಮ್ ಹೇಳುತ್ತದೆ.
ಹೀಗೆ ಇಸ್ಲಾಮ್ ಮನುಷ್ಯನ ಜೀವನದುದ್ದಕ್ಕೂ ಅವನಿಗೆ ದೈವಿಕ ಮಾರ್ಗದರ್ಶನ ನೀಡುತ್ತದೆ. ಇಲ್ಲಿ ಸೂಚಿಸಲಾಗಿರುವುದು ಅವುಗಳ ಪೈಕಿ ಕೆಲವನ್ನು ಮಾತ್ರ. ಮನುಷ್ಯನೆಂಬ ನೆಲೆಯಲ್ಲಿ ಎಲ್ಲರೊಂದಿಗೂ ಆತ್ಮೀಯವಾಗಿ ವರ್ತಿಸಬೇಕೆಂದು ಇಸ್ಲಾಮ್ ಹೇಳುತ್ತದೆ. ಇತರರ ಘನತೆ ಗೌರವಗಳಿಗೆ ಕುಂದುಂಟು ಮಾಡುವ ಎಲ್ಲ ಮಾತು, ಪ್ರವೃತ್ತಿಗಳನ್ನೂ ಇಸ್ಲಾಮ್ ವಿರೋಧಿಸುತ್ತದೆ. ಅಷ್ಟೇ ಅಲ್ಲ, ಮನುಷ್ಯ ಜೀವಿ ಸೇರಿದಂತೆ ಈ ಜಗತ್ತಿನಲ್ಲಿರುವ ಎಲ್ಲ ಜೀವಿಗಳೊಂದಿಗೆ ದಯೆ, ಕರುಣೆ ಮತ್ತು ವಾತ್ಸಲ್ಯ ತೋರಿಸಬೇಕೆಂದು ಇಸ್ಲಾಮ್ ಬೋಧಿಸುತ್ತದೆ.
Friday, 16 September 2011
Wednesday, 14 September 2011
Tuesday, 13 September 2011
NRI Secular Voice: 'Why was Team Anna silent on RTI activist's murder...
NRI Secular Voice: 'Why was Team Anna silent on RTI activist's murder...: From Hindustan times RTI activist Shehla Masood was shot dead outside her residence in posh Koh-e-Fiza localit...
Sunday, 11 September 2011
Ayan'S New Slideshow Slideshow
Ayan'S New Slideshow Slideshow: TripAdvisor™ TripWow ★ Ayan'S New Slideshow Slideshow ★ to Jeddah. Stunning free travel slideshows on TripAdvisor
Ayyu'S Independence Special Slideshow Slideshow
Ayyu'S Independence Special Slideshow Slideshow: TripAdvisor™ TripWow ★ Ayyu'S Independence Special Slideshow Slideshow ★ to Mangalore. Stunning free travel slideshows on TripAdvisor
Saturday, 10 September 2011
ಮೂವತ್ತು ಕೋಟಿ ರು. ಬೆಲೆ ಬಾಳುವ ನಟ ದರ್ಶನ್
ನಟ ದರ್ಶನ್ ಈಗ ವಿಚಾರಣಾಧೀರ ಕೈದಿ. ಸದ್ಯಕ್ಕೆ ಅವರು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಗಾಂಧಿನಗರದಲ್ಲಿ ದರ್ಶನ್ ಮೇಲೆ ಸುಮಾರು ರು.30 ಕೋಟಿ ಬಂಡವಾಳ ಹೊಡಲಾಗಿದ್ದು, ನಿರ್ಮಾಪಕರು ಅಂಗೈಯಲ್ಲಿ ಜೀವ ಹಿಡಿದು ಓಡಾಡುವಂತಾಗಿದೆ.
ದರ್ಶನ್ ಪರಿಸ್ಥಿತಿ ಹೀಗಾದ ಹಿನ್ನೆಲೆಯಲ್ಲಿ ತೀರಾ ಆತಂಕಕ್ಕೆ ಒಳಗಾಗಿರುವ ನಿರ್ಮಾಪಕ ಎಂದರೆ ಆನಂದ್ ಅಪ್ಪುಗೋಳ್. ಅವರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರದ ಮೇಲೆ ರು.12 ಕೋಟಿ ಬಂಡವಾಳ ಹೂಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಐತಿಹಾಸಿಕ ಚಿತ್ರದ ಚಿತ್ರೀಕರಣ ಶೇ.80ರಷ್ಟು ಮುಗಿದಿದೆ.
'ಚಿಂಗಾರಿ' ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ. ಬಿ ಮಹದೇವ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಹರ್ಷ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಭವಿಷ್ಯವೂ ತೂಗುಯ್ಯಾಲೆಯಲ್ಲಿದೆ. ಸದ್ಯಕ್ಕೆ 'ಚಿಂಗಾರಿ' ಚಿತ್ರೀಕರಣ ಮುಂದೂಡಲ್ಪಟ್ಟಿದೆ.
ಇತ್ತೀಚೆಗೆ ಅದ್ದೂರಿಯಾಗಿ ಸೆಟ್ಟೇರಿದ 'ವಿರಾಟ್' ಚಿತ್ರದ ಕತೆ ಕೇಳುವಂತಿಲ್ಲ. ಇದಿಷ್ಟೇ ಅಲ್ಲದೆ ಇನ್ನೂ ಅನೇಕ ನಿರ್ಮಾಪಕರು ದರ್ಶನ್ ಅವರಿಗೆ ಅಡ್ವಾನ್ಸ್ ಹಣ ನೀಡಿದ್ದಾರೆ. ಅವರೆಲ್ಲಾ ಕೈಯಲ್ಲಿ ಜೀವಹಿಡಿದು ಆಕಾಶ ನೋಡುವಂತಾಗಿದೆ. ಅಡ್ವಾನ್ಸ್ ನೀಡಿದವರಲ್ಲಿ ಮಹೇಶ್ ಸುಖಧರೆ ಹೆಸರು ಪ್ರಮುಖವಾಗಿದೆ.
ಇವರೆಲ್ಲಾ ವಿಲವಿಲ ಒದ್ದಾಡುತ್ತಿದ್ದರೆ ಕೇರ್ ಫ್ರೀಯಾಗಿರುವವರು ಮಾತ್ರ ಎಂಡಿ ಶ್ರೀಧರ್. ಅವರ 'ಬುಲ್ ಬುಲ್' ಚಿತ್ರಕ್ಕೆ ದರ್ಶನ್ ಯಾವುದೇ ಸಂಭಾವನೆ ಪಡೆದಿಲ್ಲವಂತೆ. ಅವರೊಬ್ಬರೇ ಸದ್ಯಕ್ಕೆ ಸೇಫ್. ಇನ್ನು ಸುದೀರ್ಘ ಸಮಯದಿಂದ ಸೆಟ್ಸ್ನಲ್ಲೇ ಇದ್ದ ಸಾರಥಿ ಚಿತ್ರಕ್ಕೆ ಬಿಡುಗಡೆ ಮೋಕ್ಷ ಸಿಕ್ಕಿದ್ದು ಅವರ ನಿರ್ಮಾಪಕ ಕೆ ಸಿ ಎನ್ ಚಂದ್ರಶೇಖರ್ ತಲೆಮೇಲಿನ ಭಾರ ಇಳಿದಂತಾಗಿದೆ. (ಏಜೆನ್ಸೀಸ್)
ದರ್ಶನ್ ಪರಿಸ್ಥಿತಿ ಹೀಗಾದ ಹಿನ್ನೆಲೆಯಲ್ಲಿ ತೀರಾ ಆತಂಕಕ್ಕೆ ಒಳಗಾಗಿರುವ ನಿರ್ಮಾಪಕ ಎಂದರೆ ಆನಂದ್ ಅಪ್ಪುಗೋಳ್. ಅವರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರದ ಮೇಲೆ ರು.12 ಕೋಟಿ ಬಂಡವಾಳ ಹೂಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಐತಿಹಾಸಿಕ ಚಿತ್ರದ ಚಿತ್ರೀಕರಣ ಶೇ.80ರಷ್ಟು ಮುಗಿದಿದೆ.
'ಚಿಂಗಾರಿ' ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ. ಬಿ ಮಹದೇವ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಹರ್ಷ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಭವಿಷ್ಯವೂ ತೂಗುಯ್ಯಾಲೆಯಲ್ಲಿದೆ. ಸದ್ಯಕ್ಕೆ 'ಚಿಂಗಾರಿ' ಚಿತ್ರೀಕರಣ ಮುಂದೂಡಲ್ಪಟ್ಟಿದೆ.
ಇತ್ತೀಚೆಗೆ ಅದ್ದೂರಿಯಾಗಿ ಸೆಟ್ಟೇರಿದ 'ವಿರಾಟ್' ಚಿತ್ರದ ಕತೆ ಕೇಳುವಂತಿಲ್ಲ. ಇದಿಷ್ಟೇ ಅಲ್ಲದೆ ಇನ್ನೂ ಅನೇಕ ನಿರ್ಮಾಪಕರು ದರ್ಶನ್ ಅವರಿಗೆ ಅಡ್ವಾನ್ಸ್ ಹಣ ನೀಡಿದ್ದಾರೆ. ಅವರೆಲ್ಲಾ ಕೈಯಲ್ಲಿ ಜೀವಹಿಡಿದು ಆಕಾಶ ನೋಡುವಂತಾಗಿದೆ. ಅಡ್ವಾನ್ಸ್ ನೀಡಿದವರಲ್ಲಿ ಮಹೇಶ್ ಸುಖಧರೆ ಹೆಸರು ಪ್ರಮುಖವಾಗಿದೆ.
ಇವರೆಲ್ಲಾ ವಿಲವಿಲ ಒದ್ದಾಡುತ್ತಿದ್ದರೆ ಕೇರ್ ಫ್ರೀಯಾಗಿರುವವರು ಮಾತ್ರ ಎಂಡಿ ಶ್ರೀಧರ್. ಅವರ 'ಬುಲ್ ಬುಲ್' ಚಿತ್ರಕ್ಕೆ ದರ್ಶನ್ ಯಾವುದೇ ಸಂಭಾವನೆ ಪಡೆದಿಲ್ಲವಂತೆ. ಅವರೊಬ್ಬರೇ ಸದ್ಯಕ್ಕೆ ಸೇಫ್. ಇನ್ನು ಸುದೀರ್ಘ ಸಮಯದಿಂದ ಸೆಟ್ಸ್ನಲ್ಲೇ ಇದ್ದ ಸಾರಥಿ ಚಿತ್ರಕ್ಕೆ ಬಿಡುಗಡೆ ಮೋಕ್ಷ ಸಿಕ್ಕಿದ್ದು ಅವರ ನಿರ್ಮಾಪಕ ಕೆ ಸಿ ಎನ್ ಚಂದ್ರಶೇಖರ್ ತಲೆಮೇಲಿನ ಭಾರ ಇಳಿದಂತಾಗಿದೆ. (ಏಜೆನ್ಸೀಸ್)
ಜನಾರ್ದನ ರೆಡ್ಡಿ ಬಂಗಾರವನ್ನು ಅಡಗಿಸಿಟ್ಟಿದ್ದೆಲ್ಲಿ ಗೊತ್ತೆ?
ಬಳ್ಳಾರಿ, ಸೆ. 7 : ಸಿಬಿಐನಿಂದ ಬಂಧನಕ್ಕೊಳಗಾಗಿ ಆಂಧ್ರದ ಚಂಚಲಗುಡ ಜೈಲಿನಲ್ಲಿ ಸಾಮಾನ್ಯ ಕೈದಿಯಂತೆ ದಿನತಳ್ಳುತ್ತಿರುವ ಎಂಎಲ್ಸಿ ಜಿ. ಜನಾರ್ದನ ರೆಡ್ಡಿಯ ಮನೆಯಲ್ಲಿ ಸಿಬಿಐ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ಕೂಡ ಶೋಧ ಮುಂದುವರೆಸಿದ್ದಾರೆ. ಬುಧವಾರ ಮೆಟಲ್ ಡಿಟೆಕ್ಟರ್ಗಳನ್ನು ಬಳಕೆ ಮಾಡಿ ಬಂಗಾರ, ಪ್ಲಾಟಿನಂ ಮತ್ತು ಬೆಳ್ಳಿಯ ಶೋಧ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಅಧಿಕೃತ ಮೂಲಗಳ ಪ್ರಕಾರ, ಸಿಬಿಐ ಅಧಿಕಾರಿಗಳು ರೆಡ್ಡಿಯ ಮನೆಯ ನೆಲಮಾಳಿಗೆಯಲ್ಲಿ ಅಪಾರ ಪ್ರಮಾಣದ ಬಂಗಾರ, ನಗದು ಹಣ ಹಾಗೂ ಇನ್ನಿತರೆ ಮಾಹಿತಿಗಳನ್ನು ಅಡಗಿಸಿ ಇಡಲಾಗಿದೆ ಎನ್ನುವ ಮಾಹಿತಿಯನ್ನು ಆಧರಿಸಿ ಮಂಗಳವಾರ ನಡೆಸಿದ ಶೋಧ ಯಾವುದೇ ಫಲವನ್ನು ನೀಡಿರಲಿಲ್ಲ. ಆದ್ದರಿಂದ ಬುಧವಾರಕ್ಕೆ ಮೆಟಲ್ ಡಿಟೆಕ್ಟರ್ ಮೂಲಕವೇ ಮನೆಯಲ್ಲಿ ಶೋಧ ನಡೆಸಿದ್ದಾರೆ.
ಐಷಾರಾಮಿ ಬದುಕನ್ನು ಅತಿಯಾಗಿ ಪ್ರೀತಿಸುತ್ತಿದ್ದ ಮತ್ತು ಸಕಲೈಶ್ವರ್ಯಗನ್ನು ಅನುಭವಿಸಿದ ಜನಾರ್ದನ ರೆಡ್ಡಿ, ವಾಸವಿರುವ ಮನೆಯಲ್ಲಿ ನೆಲಮಾಳಿಗೆ ಸಾಮಾನ್ಯರ ಕಣ್ಣಿಗೆ ಕಾಣುತ್ತಿಲ್ಲ. ಆದರೂ ಸಿಬಿಐ ಅಧಿಕಾರಿಗಳು ತಮಗೆ ದೊರೆತ ಮಾಹಿತಿಯನ್ನು ಆಧರಿಸಿ ತನಿಖೆಯನ್ನು ನಡೆಸಿ ಬಂಗಾರದ ಶೋಧ ನಡೆಸಿದ್ದರು.
ಆಗ, ಮೆಟಲ್ ಡಿಟೆಕ್ಟರ್ ಶೌಚಾಲಯ, ಸ್ನಾನದಗೃಹಗಳತ್ತ ಹೋದಾಗ ಬಂಗಾರ ಇರುವುದು ಪತ್ತೆ ಮಾಡಿತು. ಕೂಡಲೇ ಚುರುಕಾದ ಅಧಿಕಾರಿಗಳ ತಂಡ ಮನೆಯ ಸದಸ್ಯರನ್ನು ಸ್ಥಳಕ್ಕೆ ಕರೆಯಿಸಿ ಬಂಗಾರವನ್ನು ಅಡಗಿಸಿ ಇರಿಸಿರುವ ಕುರಿತು ಮಾಹಿತಿ ಪಡೆದರು. ಅಲ್ಲದೇ, ಸ್ನಾನದಗೃಹದಲ್ಲಿ ಅಲಂಕಾರಕ್ಕಾಗಿ, ಶೌಚಾಲಯದಲ್ಲಿ ಭದ್ರತೆಗಾಗಿ ಇರಿಸಿರುವ ಬಂಗಾರದ ಮಾಹಿತಿ ತಿಳಿದು ದಂಗಾದರು.
ಬುಧವಾರ ಮಧ್ಯಾಹ್ನದ ವೇಳೆಗೆ ಈ ಮಾಹಿತಿ ಖಚಿತವಾಗುತ್ತಿದ್ದಂತೆಯೇ ಸಿಬಿಐ ಅಧಿಕಾರಿಗಳು ಆದಾಯ ತೆರಿಗೆ ಅಧಿಕಾರಿಗಳನ್ನು ಕರೆಯಿಸಿ ಅವರ ಸಮ್ಮುಖದಲ್ಲೇ ಬಂಗಾರವನ್ನು ಹೊರ ತೆಗೆಯಲು ಮುಂದಾದರು. ಆಗ, ಒಟ್ಟು ಕನಿಷ್ಟ 30 ಕೆಜಿ ಬಂಗಾರ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿದೆ ಎಂದು ಮೂಲಗಳು ಖಚಿತಪಡಿಸಿವೆ.
ವಿದೇಶಿ ವಸ್ತುಗಳ ಮೂಲಕವೇ ಜನಾರ್ದನರೆಡ್ಡಿ ಅವರ ಸ್ನಾನಗೃಹ ಮತ್ತು ಶೌಚಾಲಯ ನಿರ್ಮಾಣವಾಗಿದ್ದು ಇವುಗಳ ಒಟ್ಟು ವೆಚ್ಚವೇ ಕೆಲ ಕೋಟಿಗಳನ್ನು ಮೀರಿಸುವಂಥಹದ್ದು. ಕುಟುಂಬದ ಸದಸ್ಯರು ಮತ್ತು ಮನೆಯ ವಿಶ್ವಾಸಾರ್ಹ - ನಂಬಿಕೆಸ್ಥ ನೌಕರರು ಮಾತ್ರ ಈ ಕೋಣೆಗಳ ಪ್ರವೇಶಕ್ಕೆ ಅರ್ಹರು.
ಸಿಬಿಐ ಅಧಿಕಾರಿಗಳ ಶೋಧ ಕಾರ್ಯ ಬುಧವಾರ ರಾತ್ರಿ 8 ಗಂಟೆ ನಂತರವೂ ಮುಂದುವರೆದಿದೆ. ಸಿಬಿಐ ತಂಡದ ಜೊತೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇದ್ದು ಸಿಕ್ಕ ಬಂಗಾರದ ಮೌಲ್ಯ ನಿಗದಿ ಮಾಡುವ, ಆದಾಯ ತೆರಿಗೆ ಪಾವತಿಸುವ ಪಟ್ಟಿಯಲ್ಲಿ ಸಿಕ್ಕಿರುವ ಬಂಗಾರಕ್ಕೆ ತೆರಿಗೆ ಪಾವತಿ ಆಗಿರುವ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ರೆಡ್ಡಿ ಪತ್ನಿಯ ಬಂಧನ? : ಜನಾರ್ದನರೆಡ್ಡಿಯ ಪತ್ನಿ ಲಕ್ಷ್ಮಿ ಅರುಣ ಅವರನ್ನು ಸಿಬಿಐ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಬಂಧಿಸಿ, ಹೈದರಾಬಾದ್ನ ಸಿಬಿಐ ಕೋರ್ಟ್ಗೆ ಒಪ್ಪಿಸಲಿದ್ದಾರೆ ಎನ್ನುವ ದಟ್ಟವಾದ ವದಂತಿಗಳು ಇರುವ ಹಿನ್ನೆಲೆಯಲ್ಲಿ ರೆಡ್ಡಿಯ ಮನೆಯ ಮುಂದೆ ಮಾಧ್ಯಮ ಪ್ರತಿನಿಧಿಗಳು ಬುಧವಾರ ಬೆಳಗ್ಗೆಯಿಂದಲೇ ಕಾದು ಕುಳಿತಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಸಿಬಿಐ ಅಧಿಕಾರಿಗಳು ರೆಡ್ಡಿಯ ಮನೆಯ ನೆಲಮಾಳಿಗೆಯಲ್ಲಿ ಅಪಾರ ಪ್ರಮಾಣದ ಬಂಗಾರ, ನಗದು ಹಣ ಹಾಗೂ ಇನ್ನಿತರೆ ಮಾಹಿತಿಗಳನ್ನು ಅಡಗಿಸಿ ಇಡಲಾಗಿದೆ ಎನ್ನುವ ಮಾಹಿತಿಯನ್ನು ಆಧರಿಸಿ ಮಂಗಳವಾರ ನಡೆಸಿದ ಶೋಧ ಯಾವುದೇ ಫಲವನ್ನು ನೀಡಿರಲಿಲ್ಲ. ಆದ್ದರಿಂದ ಬುಧವಾರಕ್ಕೆ ಮೆಟಲ್ ಡಿಟೆಕ್ಟರ್ ಮೂಲಕವೇ ಮನೆಯಲ್ಲಿ ಶೋಧ ನಡೆಸಿದ್ದಾರೆ.
ಐಷಾರಾಮಿ ಬದುಕನ್ನು ಅತಿಯಾಗಿ ಪ್ರೀತಿಸುತ್ತಿದ್ದ ಮತ್ತು ಸಕಲೈಶ್ವರ್ಯಗನ್ನು ಅನುಭವಿಸಿದ ಜನಾರ್ದನ ರೆಡ್ಡಿ, ವಾಸವಿರುವ ಮನೆಯಲ್ಲಿ ನೆಲಮಾಳಿಗೆ ಸಾಮಾನ್ಯರ ಕಣ್ಣಿಗೆ ಕಾಣುತ್ತಿಲ್ಲ. ಆದರೂ ಸಿಬಿಐ ಅಧಿಕಾರಿಗಳು ತಮಗೆ ದೊರೆತ ಮಾಹಿತಿಯನ್ನು ಆಧರಿಸಿ ತನಿಖೆಯನ್ನು ನಡೆಸಿ ಬಂಗಾರದ ಶೋಧ ನಡೆಸಿದ್ದರು.
ಆಗ, ಮೆಟಲ್ ಡಿಟೆಕ್ಟರ್ ಶೌಚಾಲಯ, ಸ್ನಾನದಗೃಹಗಳತ್ತ ಹೋದಾಗ ಬಂಗಾರ ಇರುವುದು ಪತ್ತೆ ಮಾಡಿತು. ಕೂಡಲೇ ಚುರುಕಾದ ಅಧಿಕಾರಿಗಳ ತಂಡ ಮನೆಯ ಸದಸ್ಯರನ್ನು ಸ್ಥಳಕ್ಕೆ ಕರೆಯಿಸಿ ಬಂಗಾರವನ್ನು ಅಡಗಿಸಿ ಇರಿಸಿರುವ ಕುರಿತು ಮಾಹಿತಿ ಪಡೆದರು. ಅಲ್ಲದೇ, ಸ್ನಾನದಗೃಹದಲ್ಲಿ ಅಲಂಕಾರಕ್ಕಾಗಿ, ಶೌಚಾಲಯದಲ್ಲಿ ಭದ್ರತೆಗಾಗಿ ಇರಿಸಿರುವ ಬಂಗಾರದ ಮಾಹಿತಿ ತಿಳಿದು ದಂಗಾದರು.
ಬುಧವಾರ ಮಧ್ಯಾಹ್ನದ ವೇಳೆಗೆ ಈ ಮಾಹಿತಿ ಖಚಿತವಾಗುತ್ತಿದ್ದಂತೆಯೇ ಸಿಬಿಐ ಅಧಿಕಾರಿಗಳು ಆದಾಯ ತೆರಿಗೆ ಅಧಿಕಾರಿಗಳನ್ನು ಕರೆಯಿಸಿ ಅವರ ಸಮ್ಮುಖದಲ್ಲೇ ಬಂಗಾರವನ್ನು ಹೊರ ತೆಗೆಯಲು ಮುಂದಾದರು. ಆಗ, ಒಟ್ಟು ಕನಿಷ್ಟ 30 ಕೆಜಿ ಬಂಗಾರ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿದೆ ಎಂದು ಮೂಲಗಳು ಖಚಿತಪಡಿಸಿವೆ.
ವಿದೇಶಿ ವಸ್ತುಗಳ ಮೂಲಕವೇ ಜನಾರ್ದನರೆಡ್ಡಿ ಅವರ ಸ್ನಾನಗೃಹ ಮತ್ತು ಶೌಚಾಲಯ ನಿರ್ಮಾಣವಾಗಿದ್ದು ಇವುಗಳ ಒಟ್ಟು ವೆಚ್ಚವೇ ಕೆಲ ಕೋಟಿಗಳನ್ನು ಮೀರಿಸುವಂಥಹದ್ದು. ಕುಟುಂಬದ ಸದಸ್ಯರು ಮತ್ತು ಮನೆಯ ವಿಶ್ವಾಸಾರ್ಹ - ನಂಬಿಕೆಸ್ಥ ನೌಕರರು ಮಾತ್ರ ಈ ಕೋಣೆಗಳ ಪ್ರವೇಶಕ್ಕೆ ಅರ್ಹರು.
ಸಿಬಿಐ ಅಧಿಕಾರಿಗಳ ಶೋಧ ಕಾರ್ಯ ಬುಧವಾರ ರಾತ್ರಿ 8 ಗಂಟೆ ನಂತರವೂ ಮುಂದುವರೆದಿದೆ. ಸಿಬಿಐ ತಂಡದ ಜೊತೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇದ್ದು ಸಿಕ್ಕ ಬಂಗಾರದ ಮೌಲ್ಯ ನಿಗದಿ ಮಾಡುವ, ಆದಾಯ ತೆರಿಗೆ ಪಾವತಿಸುವ ಪಟ್ಟಿಯಲ್ಲಿ ಸಿಕ್ಕಿರುವ ಬಂಗಾರಕ್ಕೆ ತೆರಿಗೆ ಪಾವತಿ ಆಗಿರುವ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ರೆಡ್ಡಿ ಪತ್ನಿಯ ಬಂಧನ? : ಜನಾರ್ದನರೆಡ್ಡಿಯ ಪತ್ನಿ ಲಕ್ಷ್ಮಿ ಅರುಣ ಅವರನ್ನು ಸಿಬಿಐ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಬಂಧಿಸಿ, ಹೈದರಾಬಾದ್ನ ಸಿಬಿಐ ಕೋರ್ಟ್ಗೆ ಒಪ್ಪಿಸಲಿದ್ದಾರೆ ಎನ್ನುವ ದಟ್ಟವಾದ ವದಂತಿಗಳು ಇರುವ ಹಿನ್ನೆಲೆಯಲ್ಲಿ ರೆಡ್ಡಿಯ ಮನೆಯ ಮುಂದೆ ಮಾಧ್ಯಮ ಪ್ರತಿನಿಧಿಗಳು ಬುಧವಾರ ಬೆಳಗ್ಗೆಯಿಂದಲೇ ಕಾದು ಕುಳಿತಿದ್ದಾರೆ.
ಕನ್ನಡ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿಗೆ
ಧರ್ಮಪತ್ನಿ ವಿಜಯಲಕ್ಷ್ಮಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಆಕೆಯನ್ನು ಮತ್ತು ಅವರಿಬ್ಬರ ಮಗ ವಿನೀಶ್ ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಬಂಧನಕ್ಕೊಳಗಾಗಿರುವ ಚಾಲೇಂಜಿಂಗ್ ಸ್ಟಾರ್ ದರ್ಶನ್ ತೂಗದೀಪ್ ಅವರಿಗೆ 1ನೇ ಎಸಿಎಂಎಂ ವೆಂಕಟೇಶ್ ಹುಲಗಿ ಜಾಮೀನು ನಿರಾಕರಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಂದರೆ ಜೈಲು.
ಸಂಜೆಯ ಹೊತ್ತಿನಲ್ಲಿ ನ್ಯಾಯಾಧೀಶರು ಕೋರ್ಟಿನಲ್ಲಿ ಇಲ್ಲದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನ ಜ್ಯುಡಿಶಿಯಲ್ ಬ್ಲಾಕ್ ನಲ್ಲಿರುವ ಅವರ ನಿವಾಸದಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಹಾಜರಾದರು. ದರ್ಶನ್ ಅವರನ್ನು ವಕೀಲರಾದ ಕೃಷ್ಣೇಗೌಡ ಮತ್ತು ರಾಘವೇಂದ್ರ ರೆಡ್ಡಿ ಪ್ರತಿನಿಧಿಸಿದ್ದರು.
ಚಿತ್ರನಟ ಅಂಬರೀಷ್ ಅವರ ಮುಖಾಂತರ ಮಾಡಲಾಗಿದ್ದ ಸಂಧಾನ ಸೂತ್ರದ ಪತ್ರವನ್ನು ನ್ಯಾಯಾಧೀಶರಿಗೆ ನೀಡಲಾಗಿದ್ದರೂ, ದರ್ಶನ್ ಮೇಲೆ ಮಾಡಿರುವ ಆರೋಪ ಜಾಮೀನುರಹಿತ ಅಪರಾಧವಾಗಿದ್ದರಿಂದ ಮತ್ತು ಸರಕಾರಿ ವಕೀಲರು ಉಪಸ್ಥಿತರಿಲ್ಲದಿದ್ದರಿಂದ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದರು.
ಜಾಮೀನು ಅರ್ಜಿಗೆ ಸರಕಾರಿ ವಕೀಲರು ಪ್ರತ್ಯುತ್ತರ ಕೊಡಬೇಕಾಗಿರುವುದರಿಂದ ಸೋಮವಾರ ಮತ್ತೆ ಅರ್ಜಿ ಸಲ್ಲಿಸಲು ನ್ಯಾಯಾಧೀಶರು ದರ್ಶನ್ ಪರ ವಕೀಲರಿಗೆ ಹೇಳಿದ್ದಾರೆ. ಆದ್ದರಿಂದ ಸೋಮವಾರದವರೆಗೆ ದರ್ಶನ್ ಪರಪ್ಪನ ಅಗ್ರಹಾರದ ಜೈಲಿನ ದರ್ಶನ ಮಾಡಲೇಬೇಕಾಗಿದೆ.
ಹಲ್ಲೆ ಕಥಗೆ ಹೊಸ ತಿರುವು : ದರ್ಶನ್ ಪತ್ನಿಗೆ ದೈಹಿಕ ಹಲ್ಲೆ ಮಾಡಿದ ಕಥೆ ಮ್ಯಾಜಿಸ್ಟ್ರೇಟ್ ಅವರ ಮನೆ ಪ್ರವೇಶಿಸುವ ಹೊತ್ತಿಗೆ ಸಂಪೂರ್ಣ ಬದಲಾಗಿದೆ. ನ್ಯಾಯಾಧೀಶರ ಮುಂದೆ ವಿಜಯಲಕ್ಷ್ಮಿ ಅವರು ದೈಹಿಕ ಹಲ್ಲೆ ಮಾಡಿದ, ಕೊಲೆ ಬೆದರಿಕೆ ಹಾಕಿದ ಘಟನೆ ನಡೆದೇ ಇಲ್ಲ. ತಾವು ಸ್ನಾನದ ಕೋಣೆಯಲ್ಲಿ ಕಾಲುಜಾರಿ ಬಿದ್ದಿದ್ದರಿಂದ ತಲೆಗೆ ಮತ್ತು ಮೈಗೆ ಪೆಟ್ಟಾಗಿದೆ ಎಂದು ತಿಳಿಸಿದ್ದಾರೆ.
ದರ್ಶನ್ ಅವರ ವಕೀಲರ ಪ್ರಕಾರ, ಪೊಲೀಸರ ಮುಂದೆ ನೀಡಿದ ಹೇಳಿಕೆಯನ್ನು ಸಾಕ್ಷಿಯೆಂದು ಪರಿಗಣಿಸಲು ಆಗುವುದಿಲ್ಲ. ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯನ್ನು ಮಾತ್ರ ಸತ್ಯವೆಂದು ಪರಿಗಣಿಸಲಾಗುವುದು. ತಮ್ಮಿಬ್ಬರ ನಡುವೆ ಏನೇ ಕಲಹಗಳಿದ್ದರೂ ಪರಸ್ಪರ ಬಗೆಹರಿಸಿಕೊಂಡು ಜೀವನ ಸಾಗಿಸುವುದಾಗಿ ಅವರು ಹೇಳಿದ್ದಾರೆ. ಪೊಲೀಸರ ಮುಂದೆ ಹೇಳಿಕೆ ನೀಡುವಾಗ ತಾವು ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದಾಗಿಯೂ ವಿಜಯಲಕ್ಷ್ಮಿ ತಿಳಿಸಿದ್ದಾರೆ.
ಸಂಜೆಯ ಹೊತ್ತಿನಲ್ಲಿ ನ್ಯಾಯಾಧೀಶರು ಕೋರ್ಟಿನಲ್ಲಿ ಇಲ್ಲದ ಕಾರಣ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನ ಜ್ಯುಡಿಶಿಯಲ್ ಬ್ಲಾಕ್ ನಲ್ಲಿರುವ ಅವರ ನಿವಾಸದಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಹಾಜರಾದರು. ದರ್ಶನ್ ಅವರನ್ನು ವಕೀಲರಾದ ಕೃಷ್ಣೇಗೌಡ ಮತ್ತು ರಾಘವೇಂದ್ರ ರೆಡ್ಡಿ ಪ್ರತಿನಿಧಿಸಿದ್ದರು.
ಚಿತ್ರನಟ ಅಂಬರೀಷ್ ಅವರ ಮುಖಾಂತರ ಮಾಡಲಾಗಿದ್ದ ಸಂಧಾನ ಸೂತ್ರದ ಪತ್ರವನ್ನು ನ್ಯಾಯಾಧೀಶರಿಗೆ ನೀಡಲಾಗಿದ್ದರೂ, ದರ್ಶನ್ ಮೇಲೆ ಮಾಡಿರುವ ಆರೋಪ ಜಾಮೀನುರಹಿತ ಅಪರಾಧವಾಗಿದ್ದರಿಂದ ಮತ್ತು ಸರಕಾರಿ ವಕೀಲರು ಉಪಸ್ಥಿತರಿಲ್ಲದಿದ್ದರಿಂದ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದರು.
ಜಾಮೀನು ಅರ್ಜಿಗೆ ಸರಕಾರಿ ವಕೀಲರು ಪ್ರತ್ಯುತ್ತರ ಕೊಡಬೇಕಾಗಿರುವುದರಿಂದ ಸೋಮವಾರ ಮತ್ತೆ ಅರ್ಜಿ ಸಲ್ಲಿಸಲು ನ್ಯಾಯಾಧೀಶರು ದರ್ಶನ್ ಪರ ವಕೀಲರಿಗೆ ಹೇಳಿದ್ದಾರೆ. ಆದ್ದರಿಂದ ಸೋಮವಾರದವರೆಗೆ ದರ್ಶನ್ ಪರಪ್ಪನ ಅಗ್ರಹಾರದ ಜೈಲಿನ ದರ್ಶನ ಮಾಡಲೇಬೇಕಾಗಿದೆ.
ಹಲ್ಲೆ ಕಥಗೆ ಹೊಸ ತಿರುವು : ದರ್ಶನ್ ಪತ್ನಿಗೆ ದೈಹಿಕ ಹಲ್ಲೆ ಮಾಡಿದ ಕಥೆ ಮ್ಯಾಜಿಸ್ಟ್ರೇಟ್ ಅವರ ಮನೆ ಪ್ರವೇಶಿಸುವ ಹೊತ್ತಿಗೆ ಸಂಪೂರ್ಣ ಬದಲಾಗಿದೆ. ನ್ಯಾಯಾಧೀಶರ ಮುಂದೆ ವಿಜಯಲಕ್ಷ್ಮಿ ಅವರು ದೈಹಿಕ ಹಲ್ಲೆ ಮಾಡಿದ, ಕೊಲೆ ಬೆದರಿಕೆ ಹಾಕಿದ ಘಟನೆ ನಡೆದೇ ಇಲ್ಲ. ತಾವು ಸ್ನಾನದ ಕೋಣೆಯಲ್ಲಿ ಕಾಲುಜಾರಿ ಬಿದ್ದಿದ್ದರಿಂದ ತಲೆಗೆ ಮತ್ತು ಮೈಗೆ ಪೆಟ್ಟಾಗಿದೆ ಎಂದು ತಿಳಿಸಿದ್ದಾರೆ.
ದರ್ಶನ್ ಅವರ ವಕೀಲರ ಪ್ರಕಾರ, ಪೊಲೀಸರ ಮುಂದೆ ನೀಡಿದ ಹೇಳಿಕೆಯನ್ನು ಸಾಕ್ಷಿಯೆಂದು ಪರಿಗಣಿಸಲು ಆಗುವುದಿಲ್ಲ. ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯನ್ನು ಮಾತ್ರ ಸತ್ಯವೆಂದು ಪರಿಗಣಿಸಲಾಗುವುದು. ತಮ್ಮಿಬ್ಬರ ನಡುವೆ ಏನೇ ಕಲಹಗಳಿದ್ದರೂ ಪರಸ್ಪರ ಬಗೆಹರಿಸಿಕೊಂಡು ಜೀವನ ಸಾಗಿಸುವುದಾಗಿ ಅವರು ಹೇಳಿದ್ದಾರೆ. ಪೊಲೀಸರ ಮುಂದೆ ಹೇಳಿಕೆ ನೀಡುವಾಗ ತಾವು ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದಾಗಿಯೂ ವಿಜಯಲಕ್ಷ್ಮಿ ತಿಳಿಸಿದ್ದಾರೆ.
Thursday, 8 September 2011
Wednesday, 7 September 2011
Tuesday, 6 September 2011
Monday, 5 September 2011
ಕುರ್ ಆನ್ ಮುಸ್ಲಿಮೇತರರನ್ನು ಕೊಲ್ಲುವಂತೆ ಆದೇಶಿಸುತ್ತದೆಯೇ?
ಕುರ್ಆನ್ನ ಸೂಕ್ತಿಗಳನ್ನು ಸಂದರ್ಭಗಳಿಂದ ಬೇರ್ಪಡಿಸಿ (out of context) ಜನರಲ್ಲಿ ಇಸ್ಲಾಮಿನ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡುವ ಕಾರ್ಯದಲ್ಲಿ ಒಂದು ವರ್ಗವು ಸದಾ ನಿರತವಾಗಿದೆ. ಕಾಫಿರರನ್ನು ಕಂಡಲ್ಲಿ ವಧಿಸಿರಿ ಎಂದು ಕುರ್ ಆನ್ ಹೇಳುತ್ತದೆ ಎಂಬುದಕ್ಕೆ ಪುರಾವೆಯಾಗಿ ಅವರು ಕುರ್ಆನಿನ 2ನೇ ಅಧ್ಯಾಯದ 190 ಮತ್ತು 9ನೇ ಅಧ್ಯಾಯದ 5ನೇ ಸೂಕ್ತಿಗಳನ್ನು ತಲೆಬಾಲ ಕತ್ತರಿಸಿ ತೋರಿಸುತ್ತಾರೆ.
2ನೇ ಅಧ್ಯಾಯದ 190-191ನೇ ಸೂಕ್ತಿಗಳು ಹೀಗಿವೆ:
ನಿಮ್ಮೊಂದಿಗೆ ಯುದ್ಧ ಮಾಡುವವರೊಂದಿಗೆ ನೀವೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ಆದರೆ ನೀವು ಹದ್ದುಮೀರದಿರಿ. ಖಂಡಿತವಾಗಿಯೂ ಹದ್ದುಮೀರುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ. ನೀವು ಅವರನ್ನು ಕಂಡಲ್ಲಿ ವಧಿಸಿರಿ ಮತ್ತು ಅವರು ನಿಮ್ಮನ್ನು ಎಲ್ಲಿಂದ ಹೊರಗಟ್ಟಿದರೋ ಅಲ್ಲಿಂದ ನೀವೂ ಅವರನ್ನು ಹೊರಗಟ್ಟಿರಿ. ಕ್ಷೋಭೆಯು ಕೊಲೆಗಿಂತಲೂ ಭೀಕರವಾಗಿದೆ. ಆದರೆ ಮಸ್ಜಿದುಲ್ ಹರಾಮ್ನ ಬಳಿಯಲ್ಲಿ ಅವರು ನಿಮ್ಮೊಂದಿಗೆ ಹೋರಾಡುವವರೆಗೆ ನೀವು ಅವರೊಂದಿಗೆ ಹೋರಾಡದಿರಿ. ಅವರೇನಾದರೂ ನಿಮ್ಮ ಮೇಲೆ ದಾಳಿ ಮಾಡಿದರೆ ಅವರನ್ನು ಕೊಂದು ಬಿಡಿರಿ. ಸತ್ಯನಿಷೇಧಿಗಳಿಗೆ ಹೀಗೆ ಪ್ರತಿಫಲವನ್ನು ನೀಡಲಾಗುವುದು. (2/190-191)
ಮೊದಲ ವಚನಗಳಲ್ಲಿ ಶತ್ರುಗಳು ಮುಸ್ಲಿಮರ ವಿರುದ್ಧ ದಾಳಿ ನಡೆಸುವಾಗ ಮುಸ್ಲಿಮರು ಕೈಗೊಳ್ಳಬೇಕಾದ ಕ್ರಮಗಳನ್ನು ವಿವರಿಸಿದ ಬಳಿಕ ಒಂದು ವೇಳೆ ಶತ್ರುಗಳು ಶಾಂತಿಪ್ರಸ್ತಾಪವನ್ನು ಮುಂದಿಟ್ಟರೆ ಅದನ್ನು ಸ್ವೀಕರಿಸಬೇಕೆಂದು ಆ ಬಳಿಕದ ಸೂಕ್ತಿಯಲ್ಲಿ ಕುರ್ಆನ್ ಕಲಿಸುತ್ತದೆ:
ಅವರೇನಾದರೂ (ಯುದ್ಧವನ್ನು) ಸ್ಥಗಿತಗೊಳಿಸಿದರೆ ಅಲ್ಲಾಹು ಅತ್ಯಂತ ಕ್ಷಮಿಸುವವನೂ ಕರುಣಾಮಯಿಯೂ ಆಗಿರುವನು. ಗಲಭೆಯು ಇಲ್ಲದಾಗುವವರೆಗೆ ಮತ್ತು ಧರ್ಮವು ಅಲ್ಲಾಹನಿಗಾಗುವವರೆಗೆ ಅವರೊಂದಿಗೆ ಹೋರಾಡಿರಿ. ಅವರೇನಾದರೂ ಸ್ಥಗಿತಗೊಳಿಸಿದರೆ ಆಗ ಅಕ್ರಮಿಗಳ ಹೊರತು ಯಾರ ಮೇಲೂ ಹಗೆತನವನ್ನು ಇಟ್ಟುಕೊಳ್ಳದಿರಿ. (2/192-193)
ಅದೇ ರೀತಿ 9ನೇ ಅಧ್ಯಾಯದ 5ನೇ ಸೂಕ್ತಿಯಲ್ಲಿ ಹೀಗಿದೆ:
ಪವಿತ್ರ ತಿಂಗಳುಗಳು ಕಳೆದರೆ ನೀವು ಬಹುದೇವಾರಾಧಕರನ್ನು ಕಂಡಲ್ಲಿ ವಧಿಸಿರಿ, ಅವರನ್ನು ಸೆರೆಹಿಡಿಯಿರಿ, ಮುತ್ತಿಗೆ ಹಾಕಿರಿ ಮತ್ತು ಅವರಿಗಾಗಿ ಹೊಂಚುಹಾಕಿ ಕುಳಿತುಕೊಳ್ಳಿರಿ. ಅವರೇನಾದರೂ ಪಶ್ಚಾತ್ತಾಪ ಪಟ್ಟು ನಮಾಝನ್ನು ಸಂಸ್ಥಾಪಿಸಿ ಝಕಾತ್ ನೀಡುವುದಾದರೆ ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿರಿ. ಅಲ್ಲಾಹು ಅತ್ಯಂತ ಕ್ಷಮಿಸುವವನೂ ಕರುಣಾಮಯಿಯೂ ಆಗಿರುವನು. (9/5)
ವಿಮರ್ಶಕರು ಆರಿಸಿಕೊಳ್ಳುವ ವಧಾ ಸೂಕ್ತಿಗಳು ಕುರ್ಆನಿನಲ್ಲಿ ಇರುವುದು ಈ ಮೇಲೆ ಹೇಳಿದ ರೀತಿಯಾಗಿದೆ. ಈಗ ಈ ಸೂಕ್ತಿಗಳನ್ನು ಸ್ವಲ್ಪ ವಿವರವಾಗಿ ತಿಳಿಯೋಣ.
2ನೇ ಅಧ್ಯಾಯದಲ್ಲಿ ಪ್ರಸ್ತಾಪಿಸಲಾದ ಸೂಕ್ತಿಯು ನಿರಂತರ ದೌರ್ಜನ್ಯಕ್ಕೀಡಾದ ಬಳಿಕ ಮುಸ್ಲಿಮರಿಗೆ ದೊರಕಿದ ಮೊತ್ತಮೊದಲ ಯುದ್ಧಾನುಮತಿಯಾಗಿದ್ದರೆ 9ನೇ ಅಧ್ಯಾಯದಲ್ಲಿರುವ ಸೂಕ್ತಿಗಳು ಅಂದು ಮುಸ್ಲಿಮರು ಮತ್ತು ಬಹುದೇವಾರಾಧಕರ ಮಧ್ಯೆ ಜಾರಿಯಲ್ಲಿದ್ದ ಒಂದು ಕರಾರಿನ ಕುರಿತು ತಿಳಿಸಿಕೊಡುತ್ತದೆ. ಬಹುದೇವಾರಾಧಕರು ಕರಾರಿನ ಶರತ್ತುಗಳನ್ನು ಉಲ್ಲಂಘಿಸಿದಾಗ ತಮ್ಮ ವರ್ತನೆಗಳನ್ನು ತಿದ್ದಿಕೊಳ್ಳಲು ಅವರಿಗೆ ಕಾಲಾವಕಾಶವನ್ನು ನೀಡಲಾಯಿತು. ಅನ್ಯಥಾಃ ಅವರ ಮೇಲೆ ಯುದ್ಧ ಘೋಷಿಸಲಾಗುವುದೆಂದು ಸಾರಲಾಯಿತು.
ಇವೆರಡು ಸೂಕ್ತಿಗಳೂ ಅವತೀರ್ಣಗೊಂಡಿದ್ದು ಯುದ್ಧದ ಹಿನ್ನೆಲೆಯಲ್ಲಾಗಿತ್ತು. ಒಂದು ದೇಶವು ಯುದ್ಧನಿರತವಾಗಿರುವ ಸಂದರ್ಭದಲ್ಲಿ ಆ ದೇಶವು ಅಥವಾ ಅದರ ಸೇನಾಧಿಪತಿಯು ತನ್ನ ಸೈನಿಕರನ್ನು ಹುರಿದುಂಬಿಸುವುದಕ್ಕಾಗಿ ನೀವು ಶತ್ರುಗಳನ್ನು ಕಂಡಲ್ಲಿ ಕೊಲ್ಲಿರಿ ಎಂದು ಆದೇಶಿಸುವುದನ್ನು ಭಯೋತ್ಪಾದನೆಗೆ ಪ್ರೇರಣೆಯೆಂದು ಕರೆಯಲಾದೀತೇ? ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಯುದ್ಧ ನಡೆಯುವಾಗ ನಮ್ಮ ಸೇನಾಧಿಪತಿಯು ಪಾಕಿಸ್ಥಾನಿ ಸೈನಿಕರನ್ನು ಕಂಡಲ್ಲಿ ವಧಿಸಿರಿ ಎಂದು ನಮ್ಮ ಸೈನಿಕರಿಗೆ ಆದೇಶಿಸಿದರೆ ಅದು ಪಾಕಿಸ್ಥಾನಿಗಳ ಮೇಲೆ ಭಯೋತ್ಪಾದನೆ ನಡೆಸುವುದಕ್ಕೆ ಪುರಾವೆಯಾದೀತೇ? ಅದೇ ರೀತಿ ಅಮೆರಿಕ ಮತ್ತು ವಿಯಟ್ನಾಂ ಮಧ್ಯೆ ಯುದ್ಧ ನಡೆದಿತ್ತು. ಆ ಸಮಯದಲ್ಲಿ ಅಮೆರಿಕನ್ ಸೇನಾ ಮುಖ್ಯಸ್ಥರು ವಿಯಟ್ನಾಮಿಗಳನ್ನು ಕಂಡಲ್ಲಿ ಕೊಲ್ಲಿರಿ ಎಂದಿದ್ದನ್ನು ಇಂದು ಯಾರಾದರೂ ಯುದ್ಧದ ಹಿನ್ನೆಲೆಯನ್ನು ಮರೆಮಾಚಿಕೊಂಡು ಹೇಳಿದಲ್ಲಿ ಖಂಡಿತವಾಗಿಯೂ ಅದು ಅಮೆರಿಕನ್ ಸೇನಾ ಮುಖ್ಯಸ್ಥರನ್ನು ಒಬ್ಬ ಭಯೋತ್ಪಾದಕ ಅಥವಾ ಕಟುಕನಾಗಿ ಬಿಂಬಿಸುವುದರಲ್ಲಿ ಯಾವುದೇ ಸಂಶಯವಿಲ್ಲ.
ಕುರ್ಆನ್ನಲ್ಲಿರುವ ವಧಾ ಸೂಕ್ತಿಗಳನ್ನು ಇಸ್ಲಾಮಿನ ವಿರುದ್ಧವಾಗಿ ಪ್ರಚಾರ ಮಾಡಿದವರಲ್ಲಿ ಅರುಣ್ ಶೌರಿಯೂ ಒಬ್ಬರು. ತಮ್ಮ ದಿ ವರ್ಲ್ಡ್ ಆಫ್ ಫತ್ವಾಸ್ (The World of Fatwas) ಎಂಬ ಗ್ರಂಥದಲ್ಲಿ ಅವರು ಕುರ್ಆನಿನ 9ನೇ ಅಧ್ಯಾಯದ ಇದೇ 5ನೇ ಸೂಕ್ತಿಯನ್ನೇ ಆರಿಸಿರುವರು.
ನೀವು ಬಹುದೇವಾರಾಧಕರನ್ನು ಕಂಡಲ್ಲಿ ಕೊಲ್ಲಿರಿ (ಕುರ್ ಆನ್ 9/5)
ತಮಾಷೆಯೆಂದರೆ ಅವರು 5ನೇ ಸೂಕ್ತಿಯ ಬಳಿಕ 6ನೇ ಸೂಕ್ತಿಯನ್ನು ಉಲ್ಲೇಖಿಸದೇ ನೇರವಾಗಿ 7ನೇ ಸೂಕ್ತಿಗೆ ಜಿಗಿದಿರುವರು. ಕಾರಣವೇನೆಂದರೆ 6ನೇ ಸೂಕ್ತಿಯಲ್ಲಿ ವಿಮರ್ಶಕರ ದುರ್ವಾದಗಳಿಗೆ ಸಮರ್ಪಕವಾದ ಉತ್ತರವಿದೆ. ಆ ಸೂಕ್ತಿಯಲ್ಲಿ ಅಲ್ಲಾಹು ತನ್ನ ಪ್ರವಾದಿಯೊಂದಿಗೆ ಹೀಗೆ ಆದೇಶಿಸುತ್ತಾನೆ.
ಬಹುದೇವಾರಾಧಕರ (ಶತ್ರುಗಳ) ಪೈಕಿ ಯಾರಾದರೂ ನಿನ್ನೊಂದಿಗೆ ಆಶ್ರಯವನ್ನು ಬೇಡಿದರೆ ಅವನಿಗೆ ಆಶ್ರಯ ನೀಡು. ಅವನು ಅಲ್ಲಾಹನ ವಚನವನ್ನು ಕೇಳುವಂತಾಗಲಿ. ನಂತರ ಅವನನ್ನು ಅವನಿಗೆ ಅತ್ಯಂತ ಸುರಕ್ಷಿತವಾಗಿರುವ ಸ್ಥಳಕ್ಕೆ ತಲುಪಿಸು. ಅದು ಯಾಕೆಂದರೆ ಅವರು ತಿಳುವಳಿಕೆಯಿಲ್ಲದ ಜನತೆಯಾಗಿರುವುದರಿಂದಾಗಿದೆ. (9/6)
ನಾವು ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿದಲ್ಲಿ ಅತ್ಯಂತ ಸೌಮ್ಯ ಹಾಗೂ ಶಾಂತಿಪ್ರಿಯ ಸೇನಾಧಿಕಾರಿ ಕೂಡಾ ಹೆಚ್ಚೆಂದರೆ ಶರಣಾದ ಸೈನಿಕನನ್ನು ಸ್ವತಂತ್ರವಾಗಿ ಓಡಿಹೋಗಲಷ್ಟೇ ಬಿಡುವನು. ಆದರೆ ಅವನನ್ನು ಸುರಕ್ಷಿತ ತಾಣಕ್ಕೆ ತಲಪಿಸಿರಿ ಎಂಬ ಆಜ್ಞೆಯನ್ನು ಎಂದೂ ನೀಡಲಾರ. ಅವನೆಷ್ಟು ಶಾಂತಿಪ್ರಿಯನಾಗಿದ್ದರೂ ಸರಿಯೇ. ಕುರ್ಆನ್ ಜಗತ್ತಿಗೆ ಶಾಂತಿ, ಕರುಣೆಯ ಪಾಠವನ್ನು ಕಲಿಸಲು ಅವತೀರ್ಣಗೊಂಡ ಗ್ರಂಥವಾಗಿದೆ. ಆದ್ದರಿಂದಲೇ ಅದು ಶತ್ರುವನ್ನು ಸುರಕ್ಷಿತ ಸ್ಥಳಕ್ಕೆ ತಲಪಿಸರಿ ಎಂದು ಆದೇಶಿಸುತ್ತದೆ. ಕುರ್ಆನ್ ವಚನಗಳನ್ನು ಅಸಾಂದರ್ಭಿಕವಾಗಿ ಉಲ್ಲೇಖಿಸುವಾಗ ವಿಮರ್ಶಕರು ಈ ವಚನದ ಹತ್ತಿರ ಕೂಡಾ ಸುಳಿಯುವುದಿಲ್ಲವೆಂಬುದು ಆಶ್ಚರ್ಯಕರವಾಗಿದೆ.
ಇನ್ನು ಇಂದು ಮುಸ್ಲಿಮರ ಪೈಕಿ ಭಯೋತ್ಪಾದನಾ ಕೃತ್ಯಗಳಲ್ಲಿ ನಿರತರಾದವರಿಗೆ ಮುಸ್ಲಿಮೇತರರನ್ನು ವಧಿಸಲು ಕುರ್ಆನ್ ನಲ್ಲಿರುವ ಇಂತಹ ಸೂಕ್ತಿಗಳೇ ಪ್ರೇರಣೆ ಎಂಬ ಆರೋಪದ ಕುರಿತು ಹೇಳುವುದಾದರೆ ಇದೊಂದು ಶುದ್ಧ ಸುಳ್ಳು ಹಾಗೂ ಕೆಲವು ಮಾಧ್ಯಮಗಳ ಸೃಷ್ಟಿಯಾಗಿದೆ. ಜಗತ್ತಿನಲ್ಲಿರುವ ಭಯೋತ್ಪಾದಕರೆಲ್ಲರೂ ಮುಸ್ಲಿಮರು ಎಂಬಂತೆ ಬಿಂಬಿಸಲು ಅವರು ನಡೆಸುತ್ತಿರುವ ವಿಫಲ ಯತ್ನವಾಗಿದೆ. ಇದಕ್ಕಾಗಿ ಅವರು ಒಂದು ವಿಶೇಷ ಘೋಷಣೆಯನ್ನೇ ಸೃಷ್ಟಿಸಿಕೊಂಡಿರುವರು. ಮುಸ್ಲಿಮರೆಲ್ಲರೂ ಭಯೋತ್ಪಾದಕರಲ್ಲ. ಆದರೆ ಭಯೋತ್ಪಾದಕರೆಲ್ಲರೂ ಮುಸ್ಲಿಮರು. ಇದೊಂದು ಶುದ್ಧ ವಂಚನೆ. ವಾಸ್ತವಿಕವಾಗಿ ಇಂದು ಎಷ್ಟು ಸ್ಪೋಟ ಪ್ರಕರಣಗಳನ್ನು ನಾವು ಪತ್ರಿಕೆಗಳಲ್ಲಿ ಮುಸ್ಲಿಮ್ ಭಯೋತ್ಪಾದನೆಯೆಂಬ ಶೀರ್ಷಿಕೆಯಲ್ಲಿ ಕಾಣುತ್ತಿರುವೆವೋ ಅವಕ್ಕಿಂತ ಎಷ್ಟೋ ಅಧಿಕ ಸಂಖ್ಯೆಯ ಸ್ಪೋಟ ಪ್ರಕರಣಗಳೂ, ಸಾವು ನೋವುಗಳೂ ಜಗತ್ತಿನಾದ್ಯಂತ ಸಂಭವಿಸುತ್ತಲೇ ಇವೆ. ವ್ಯತ್ಯಾಸವೆಂದರೆ ಇವುಗಳನ್ನು ವೈಭವೀಕರಿಸಲಾಗುತ್ತಿಲ್ಲ. ಭಯೋತ್ಪಾದನೆ, ಆತ್ಮಾಹುತಿ ಬಾಂಬ್ ದಾಳಿ ಎಂಬ ಭೂತಗಳನ್ನು ಹುಟ್ಟು ಹಾಕಿದವರು ಮುಸ್ಲಿಮರು ಎಂಬ ತಪ್ಪುಕಲ್ಪನೆಯು ಪ್ರಚಲಿತದಲ್ಲಿದೆ. ವಾಸ್ತವಿಕವಾಗಿ ಮುಸ್ಲಿಮೇತರ ಭಯೋತ್ಪಾದಕರು ಜಗತ್ತಿನಾದ್ಯಂತ ನಡೆಸಿದ ನರಮೇಧಗಳನ್ನು ಒಟ್ಟುಗೂಡಿಸಿದರೆ ಮುಸ್ಲಿಮ್ ಭಯೋತ್ಪಾದಕರು ಮಾಡಿದ್ದು ಏನೇನೂ ಇಲ್ಲ ಎಂದು ತಿಳಿಯಬಹುದಾಗಿದೆ. ಆದರೆ ಇತ್ತೀಚೆಗೆ ಭಯೋತ್ಪಾದನಾ ಕೃತ್ಯಗಳಲ್ಲಿ ಮುಸ್ಲಿಮೇತರರ ಹೆಸರುಗಳು ಬಹಿರಂಗಗೊಳ್ಳ ತೊಡಗಿದಾಗ ಅದೇ ಮಾಧ್ಯಮಗಳು ಭಯೋತ್ಪಾದಕರಿಗೆ ಧರ್ಮವಿಲ್ಲ ಎಂಬ ಹೊಸ ಘೋಷಣೆಯನ್ನು ಸೃಷ್ಟಿಸಿದ್ದಾರೆ!
ಪ್ರಭಾಕರನ್, ಹಿಟ್ಲರ್, ಮುಸ್ಸಲೋನಿ, ಜಾರ್ಜ್ ಬುಶ್ ಮುಂತಾದ ಜಗದ್ವಿಖ್ಯಾತ ಭಯೋತ್ಪಾದಕರಾರೂ ಮುಸ್ಲಿಮರಲ್ಲ. ಹಾಗಾದರೆ ಇವರನ್ನು ಭಯೋತ್ಪಾದನೆಗೆ ಪ್ರೋತ್ಸಾಹಿಸಿದ್ದಾದರೂ ಏನು? ಅವರ ಧರ್ಮಗ್ರಂಥಗಳೇ? ಇವರನ್ನೇಕೆ ಧರ್ಮದ ಆಧಾರದಲ್ಲಿ ಭಯೋತ್ಪಾದಕರೆಂದು ಕರೆಯಲಾಗುವುದಿಲ್ಲ?
ಇನ್ನು ಒಂದು ಧರ್ಮದ ಗ್ರಂಥದಲ್ಲಿ ಯುದ್ಧದ ಆಜ್ಞೆಗಳು ಇವೆ ಎಂಬ ಕಾರಣಕ್ಕಾಗಿ ಒಂದು ಧರ್ಮವನ್ನು ಭಯೋತ್ಪಾದಕ ಸ್ಥಾನದಲ್ಲಿ ನಿಲ್ಲಿಸುವುದಾದರೆ ಹಿಂದೂ ಗ್ರಂಥಗಳಲ್ಲಿರುವ ಈ ಕೆಳಗಿನ ಯುದ್ಧಾಜ್ಞೆಗಳು ಹಿಂದೂಧರ್ಮವು ಭಯೋತ್ಪಾದನೆಗೆ ಪ್ರೇರಣೆ ನೀಡುತ್ತದೆಂದು ಹೇಳಬಹುದೇ?
ಮಹಾಭಾರತ ಯುದ್ಧದ ಸಂದರ್ಭದಲ್ಲಿ ತನ್ನ ದಾಯಾದಿಗಳ ವಿರುದ್ಧ ಹೋರಾಡಲು ಅರ್ಜುನನು ಹಿಂಜರಿದಾಗ ಅವನಿಗೆ ಶ್ರೀಕೃಷ್ಣನು ನೀಡುವ ಆದೇಶವನ್ನು ಭಗವದ್ಗೀತೆ ಯಲ್ಲಿ (2/37) ಈ ರೀತಿ ಉದ್ಧರಿಸಲಾಗಿದೆ:
हतॊ वा प्राप्स्यसि स्वर्गं
जित्वा वा भॊक्ष्यसॆ महीम् ।
तस्मादुत्तिष्ठ कौन्तॆय
युद्धाय कृतनिश्चयः ॥
सुखदुःखॆ समॆ कृत्वा
लाभालाभौ जयजयौ ।
ततॊ युद्धाय युज्यस्व
नैवं पापमवाप्स्यसि ॥ (ಭಗವದ್ಗೀತೆ ಅಧ್ಯಾಯ 2 ಶ್ಲೋಕ 37-38)
ಒಂದೋ ನೀನು ಯುದ್ಧದಲ್ಲಿ ಕೊಲ್ಲಲ್ಪಟ್ಟರೆ ಸ್ವರ್ಗವನ್ನು ಪಡೆಯುವೆ ಅಥವಾ ಯುದ್ಧದಲ್ಲಿ ಗೆದ್ದರೆ ಪೃಥ್ವಿಯ ರಾಜ್ಯವನ್ನು ಭೋಗಿಸುವೆ ಈ ಕಾರಣದಿಂದ ಹೇ ಅರ್ಜುನನೇ! ನೀನು ಯುದ್ಧಕ್ಕಾಗಿ ನಿಶ್ಚಯಮಾಡಿ ಎದ್ದು ನಿಲ್ಲು. ಜಯ-ಪರಾಜಯ, ಲಾಭ-ಹಾನಿ ಮತ್ತು ಸುಖ ದುಃಖಗಳನ್ನು ಸಮಾನವಾಗಿ ತಿಳಿದುಕೊಂಡು, ಅನಂತರ ಯುದ್ಧಕ್ಕಾಗಿ ಸಿದ್ಧನಾಗು, ಈ ಪ್ರಕಾರ ಯುದ್ಧ ಮಾಡುವುದರಿಂದ ನೀನು ಪಾಪವನ್ನು ಹೊಂದುವುದಿಲ್ಲ.
ಜಯದಯಾಲ ಗೋಯಂದಕಾರವರು ತಮ್ಮ ಶ್ರೀಮದ್ಭಗವದ್ಗೀತೇ-ತತ್ವವಿವೇಚಿನೀ ಟೀಕಾ ಎಂಬ ಗ್ರಂಥದಲ್ಲಿ (ಪುಟ 68) ಈ ಮೇಲಿನ ವಚನವನ್ನು ಹೀಗೆ ವಿವರಿಸಿದ್ದಾರೆ:
ಆರನೇ ಶ್ಲೋಕದಲ್ಲಿ ಅರ್ಜುನನು – ನನಗಾಗಿ ಯುದ್ಧ ಮಾಡುವುದು ಅಥವಾ ಮಾಡದಿರುವುದು ಯಾವುದು ಶ್ರೇಷ್ಠವಾಗಿದೆ ಹಾಗೂ ಯುದ್ಧದಲ್ಲಿ ವಿಜಯವು ನಮಗಾಗುವುದೋ ಅಥವಾ ನಮ್ಮ ಶತ್ರುಗಳಿಗೋ? ಇದರ ನಿರ್ಣಯವನ್ನು ನಾನು ಮಾಡಲಾರೆ; ಎಂಬ ಮಾತನ್ನು ಹೇಳಿದ್ದನು. ಇದಕ್ಕೆ ಉತ್ತರವನ್ನು ಕೊಡುತ್ತಾ ಯುದ್ಧ ಮಾಡುತ್ತಾ ಮಾಡುತ್ತಾ ಸಾಯುವುದರಲ್ಲಿ ಅಥವಾ ವಿಜಯವನ್ನು ಪಡೆಯುವುದರಲ್ಲಿ ಈ ಎರಡರಲ್ಲೂ ಲಾಭವನ್ನು ತೋರಿಸಿಕೊಟ್ಟು ಅರ್ಜುನನಿಗೆ ಯುದ್ಧದ ಶ್ರೇಷ್ಠತೆಯನ್ನು ಭಗವಂತನು ಸಿದ್ಧಪಡಿಸುತ್ತಾನೆ. ಒಂದು ವೇಳೆ ಯುದ್ಧದಲ್ಲಿ ನಿನ್ನ ಶತ್ರುಗಳಿಗೆ ಜಯವುಂಟಾಗಿ ನೀನು ಕೊಲ್ಲಲ್ಪಟ್ಟರೂ ಸಹ ಒಳ್ಳೆಯ ಮಾತೇ ಆಗುತ್ತದೆ; ಏಕೆಂದರೆ ಯುದ್ಧದಲ್ಲಿ ಪ್ರಾಣತ್ಯಾಗ ಮಾಡುವುದರಿಂದ ನಿನಗೆ ಸ್ವರ್ಗ ದೊರೆಯುವುದು ಮತ್ತು ಒಂದು ವೇಳೆ ವಿಜಯಿಯಾದರೆ ಭೂಮಂಡಲದ ರಾಜ್ಯ ಸುಖವನ್ನು ಅನುಭವಿಸುವೆ; ಆದುದರಿಂದ ಎರಡೂ ದೃಷ್ಟಿಗಳಿಂದ ನಿನಗಾದರೋ ಯುದ್ಧ ಮಾಡುವುದೇ ಎಲ್ಲ ಪ್ರಕಾರದಿಂದಲೂ ಶ್ರೇಷ್ಠವಾಗಿದೆ. ಅದಕ್ಕಾಗಿ ನೀನು ಯುದ್ಧಕ್ಕೆ ಕಟಿಬದ್ಧನಾಗಿ ಸಿದ್ಧನಾಗು ಎಂಬುದೇ ಅಭಿಪ್ರಾಯವಾಗಿದೆ. (ಶ್ರೀಮದ್ಭಗವದ್ಗೀತೇ-ತತ್ವವಿವೇಚಿನೀ ಟೀಕಾ ಎಂಬ ಗ್ರಂಥದಲ್ಲಿ ಪುಟ 68)
ಇಲ್ಲಿರುವ ಗಮನಾರ್ಹವಾದ ಸಂಗತಿಯೇನೆಂದರೆ ಶ್ರೀಕೃಷ್ಣನು ಅರ್ಜುನನೊಂದಿಗೆ ಹೋರಾಡಲು ಹುರಿದುಂಬಿಸುವುದು ಅವನ ಸ್ವಂತ ದಾಯಾದಿಗಳೊಂದಿಗಾಗಿದೆ. ಅರ್ಥಾತ್ ಅವನ ಪಿತೃಸಹೋದರ ಪುತ್ರರೊಂದಿಗಾಗಿದೆ. ಒಂದೋ ನೀನು ಅವರನ್ನು ನಾಶ ಮಾಡಬೇಕು ಅಥವಾ ನೀನು ನಾಶವಾಗಬೇಕು. ಆದರೆ ಯುದ್ಧದಿಂದ ನೀನು ಹಿಂಜರಿಯಬಾರದು. ಎರಡರಲ್ಲಿಯೂ ನಿನಗೇ ಒಳಿತೇ ಇದೆ ಎಂದು ಬೋಧಿಸುತ್ತಾನೆ.
ಈ ವಚನದ ಆಧಾರದಲ್ಲಿ ಭಗವದ್ಗೀತೆಯು ಸ್ವಂತ ದಾಯಾದಿಗಳನ್ನೇ ಕೊಲ್ಲಲು ಆದೇಶಿಸುತ್ತದೆ ಎಂದು ಹೇಳಲಾದೀತೇ? ಖಂಡಿತವಾಗಿಯೂ ಸಾಧ್ಯವಿಲ್ಲ. ಏಕೆಂದರೆ ಈ ವಚನದ ಹಿನ್ನೆಲೆ ಯುದ್ಧಭೂಮಿಯಾಗಿದೆ.
ಋಗ್ವೇದದ ಒಂದನೇ ಮಂಡಲ, 132ನೇ ಸೂಕ್ತದ 2ರಿಂದ 6ರವರೆಗಿನ ಋಕ್ಕುಗಳು ಯುದ್ಧ ಮಾಡುವುದನ್ನು ಹುರಿದುಂಬಿಸುತ್ತವೆ. ಉದಾಹರಣೆಗೆ ಅದರ ನಾಲ್ಕನೇ ಋಕ್ಕಿನ ಒಂದು ಭಾಗವನ್ನು ನೋಡಿರಿ:
ಓ ಇಂದ್ರದೇವ, ಯಜ್ಞಾದಿ ಶ್ರೇಷ್ಠ ಕರ್ಮಗಳನ್ನು ಮಾಡುವವರ ಹಿತಕ್ಕೋಸ್ಕರ ನೀನು ಯಜ್ಞವಿರುದ್ಧರನ್ನು ಮತ್ತು ಕ್ರೋಧಯುಕ್ತ ಪಾಪಿಗಳನ್ನು ನಾಶಗೊಳಿಸು.
ಋಗ್ವೇದದ ಈ ವಚನವು ಯಜ್ಞವಿರೋಧಿಗಳನ್ನು ಸಾರ್ವತ್ರಿಕವಾಗಿ ಕೊಲ್ಲಲು ಆದೇಶಿಸುತ್ತದೆ ಎಂದು ಇದರ ಆಧಾರದಲ್ಲಿ ಹೇಳಲು ಸಾಧ್ಯವೇ? ಖಂಡಿತ ಸಾಧ್ಯವಿಲ್ಲ!
ಇದೇ ರೀತಿ ಕುರ್ಆನಿನಲ್ಲಿರುವ ವಚನಗಳು ಕೂಡಾ ಯುದ್ಧದ ಹಿನ್ನೆಲೆಯಲ್ಲಿ ಅವತೀರ್ಣಗೊಂಡ ವಚನಗಳಾಗಿವೆ. ಮುಸ್ಲಿಮೇತರರನ್ನು ಸದಾ ಕೊಲ್ಲುತ್ತಿರಬೇಕು ಎಂಬ ಆಶಯವನ್ನು ಈ ವಚನಗಳು ಸಾರುವುದಿಲ್ಲ.
ಇನ್ನು ಮುಸ್ಲಿಮ್ ಭಯೋತ್ಪಾದಕರು ಕುರ್ಆನಿನ ಆಧಾರದಿಂದಲೇ ಮುಸ್ಲಿಮೇತರರನ್ನು ಕೊಲ್ಲುತ್ತಿರುವರು ಎಂದು ವಾದಿಸುತ್ತಿರುವವರು ಪ್ರಾರ್ಥನಾ ನಿರತ ಮುಸ್ಲಿಮರ ಮೇಲೆ ಬಾಂಬ್ ಎಸೆದು ಕೊಲ್ಲಲು ಅದೇ ಭಯೋತ್ಪಾದಕರಿಗೆ ಯಾವ ಸೂಕ್ತಿಗಳು ಪ್ರೇರಣೆ ನೀಡಿದವು ಎಂಬುದನ್ನು ಕೂಡಾ ಸ್ಪಷ್ಟಪಡಿಸಿಕೊಡಬೇಕು.
ಸಂಕ್ಷಿಪ್ತವಾಗಿ ಹೇಳುವುದಾದರೆ ಕುರ್ಆನ್ನಲ್ಲಿ ವಧಾಸೂಕ್ತಿಗಳನ್ನು ವ್ಯಾಖ್ಯಾನಿಸುವಾಗ ಅವುಗಳ ಅವತೀರ್ಣ ಹಿನ್ನೆಲೆಗಳನ್ನು ಅರಿತುಕೊಂಡಿರುವುದು ಕಡ್ಡಾಯವಾಗಿದೆ. ಯಾಕೆಂದರೆ ಕುರ್ಆನ್ನ ಎಲ್ಲ ವಚನಗಳೂ ಎಲ್ಲ ಸಂದರ್ಭಗಳಲ್ಲೂ ಒಂದೇ ರೀತಿಯಾಗಿ ಅನ್ವಯಿಸುತ್ತದೆ ಎಂದು ಜಗತ್ತಿನ ಒಬ್ಬನೇ ಒಬ್ಬ ಕುರ್ಆನ್ ವ್ಯಾಖ್ಯಾನಕಾರನು ಹೇಳಿಲ್ಲ. ಇನ್ನು ಮುಸ್ಲಿಮರ ಪೈಕಿ ಕೆಲವರು ತಮ್ಮ ಸ್ವಾರ್ಥ ಹಿತಾಸಕ್ತಿಗಳಿಗಾಗಿ ಈ ಸೂಕ್ತಿಗಳನ್ನು ದುರುಪಯೋಗಪಡಿಸಿಕೊಂಡರೆ ಅದಕ್ಕೆ ಕುರ್ಆನ್ ಹೊಣೆಯಾಗಲಾರದು. ಇಸ್ಲಾಮಿನ ಹೆಸರಿನಲ್ಲಿ ಇಂದು ಕೆಲವರು ನಡೆಸುತ್ತಿರುವ ಭಯೋತ್ಪಾದನೆಯನ್ನು ಮುಸ್ಲಿಮ್ ವಿದ್ವಾಂಸರೆಲ್ಲರೂ ಒಕ್ಕೊರಳಿನಿಂದ ಖಂಡಿಸಿದ್ದಾರೆ.
ಅಕ್ರಮ ಗಣಿಗಾರಿಕೆ : ಸಿಬಿಐ ದಾಳಿ, ಜನಾರ್ದನ ರೆಡ್ಡಿ ಬಂಧನ
ಬೆಂಗಳೂರು : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಭಾರೀ ವಿವಾದದಲ್ಲಿ ಸಿಲುಕಿರುವ ಮಾಜಿ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿಯವರನ್ನು ಇಂದು ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಮುಂಜಾನೆಯೇ ಅವರ ಬೆಂಗಳೂರಿನ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಇದೇ ಸಂದರ್ಭ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಎಂಬವರನ್ನೂ ಬಂಧಿಸಲಾಗಿದೆ
ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರೋಸಯ್ಯ ಅವರು ಅಕ್ರಮ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆಗೆ ಆದೇಶಿಸಿದ್ದರಿಂದ ಸಿಬಿಐ ತಂಡ ಏಕಕಾಲಕ್ಕೆ ಬಳ್ಳಾರಿ ಹಾಗೂ ಬೆಂಗಳೂರು ನಿವಾಸಗಳ ಮೇಲೆ ದಾಳಿ ನಡೆಸಿವೆ ಎಂದು ಮೂಲಗಳು ತಿಳಿಸಿವೆ. ಗಡಿನಾಶ ಗುರುತು, ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪಗಳ ಹಿನ್ನೆಲೆಯಲ್ಲಿ ಕಾಯ್ದೆ 120 ಹಾಗೂ 120 ‘ಬಿ’ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಲ್ಲಿಯೂ ಜನಾರ್ದನ ರೆಡ್ಡಿ ಹೆಸರು ಉಲ್ಲೇಖವಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬೇಕಾಗುತ್ತದೆ.