Powered By Blogger

Sunday 18 September 2011

ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಪ್ರಧಾನ ಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ ಮಾಯಾವತಿ


ಲಕ್ನೋ ( ಉತ್ತರ ಪ್ರದೇಶ ) : ದೇಶದ ಪ್ರಮುಖ ಅಲ್ಪ ಸಂಖ್ಯಾತ ಸಮುದಾಯವಾದ ಮುಸ್ಲಿಂ ಜನಾಂಗಕ್ಕೆ ಅವರ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಕುಮಾರಿ ಮಾಯಾವತಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸ್ವಾತಂತ್ರ್ಯ ಬಂದು ಅರವತ್ತನಾಲ್ಕು ವರ್ಷಗಳು ಕಳೆದಿದ್ದರೂ ಈ ಸಮುದಾಯ ಇನ್ನೂ ಹಲವು ಕ್ಷೇತ್ರಗಳಲ್ಲಿ ಪ್ರಗತಿಯನ್ನೇ ಕಂಡಿಲ್ಲ. ಈ ಸಮುದಾಯದ ಅಭಿವೃದ್ಧಿಗೆ ಮೀಸಲಾತಿ ನೀಡುವುದೊಂದೇ ಸೂಕ್ತ ಪರಿಹಾರವಾಗಿದ್ದು ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಯುಪಿಎ ಸರ್ಕಾರ ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

No comments:

Post a Comment