Powered By Blogger

Monday 5 September 2011

ಅಕ್ರಮ ಗಣಿಗಾರಿಕೆ : ಸಿಬಿಐ ದಾಳಿ, ಜನಾರ್ದನ ರೆಡ್ಡಿ ಬಂಧನ


ಬೆಂಗಳೂರು : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಭಾರೀ ವಿವಾದದಲ್ಲಿ ಸಿಲುಕಿರುವ ಮಾಜಿ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿಯವರನ್ನು ಇಂದು ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಮುಂಜಾನೆಯೇ ಅವರ ಬೆಂಗಳೂರಿನ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಇದೇ ಸಂದರ್ಭ ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಎಂಬವರನ್ನೂ ಬಂಧಿಸಲಾಗಿದೆ
ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರೋಸಯ್ಯ ಅವರು ಅಕ್ರಮ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆಗೆ ಆದೇಶಿಸಿದ್ದರಿಂದ ಸಿಬಿಐ ತಂಡ ಏಕಕಾಲಕ್ಕೆ ಬಳ್ಳಾರಿ ಹಾಗೂ ಬೆಂಗಳೂರು ನಿವಾಸಗಳ ಮೇಲೆ ದಾಳಿ ನಡೆಸಿವೆ ಎಂದು ಮೂಲಗಳು ತಿಳಿಸಿವೆ. ಗಡಿನಾಶ ಗುರುತು, ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪಗಳ ಹಿನ್ನೆಲೆಯಲ್ಲಿ ಕಾಯ್ದೆ 120 ಹಾಗೂ 120 ‘ಬಿ’ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಲ್ಲಿಯೂ ಜನಾರ್ದನ ರೆಡ್ಡಿ ಹೆಸರು ಉಲ್ಲೇಖವಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬೇಕಾಗುತ್ತದೆ.

No comments:

Post a Comment