Powered By Blogger

Saturday 15 October 2011

ಪ್ರಶಾಂತ್ ಭೂಷಣ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಜಾಮೀನು




ನವದೆಹಲಿ : ಪ್ರಶಾಂತ್ ಭೂಷಣ್ ಮೇಲೆ ಹಲ್ಲೆ ನಡೆಸಿ ಪೋಲಿಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಮೂವರು ಆರೋಪಿಗಳಿಗೆ ದೆಹಲಿ ಮೆಟ್ರೋಪಾಲಿನ್ ನ್ಯಾಯಾಲಯ ಜಾಮೀನು ನೀಡಿದೆ. ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ತಲಾ ಇಪ್ಪತ್ತೈದು ಸಾವಿರ ಬಾಂಡ್ ಆಧಾರದ ಮೇಲೆ ಮೂವರೂ ಆರೋಪಿಗಳಿಗೆ ಜಾಮೀನು ನೀಡಿದರು . ಆರೋಪಿಗಳು ಸುಪ್ರೀಂ ಕೋರ್ಟ್ ಪರಿಸರದಲ್ಲಿ ಪ್ರವೇಶಿಸಬಾರದು ಎಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಸುದೇಶ್ ಕುಮಾರ್ ಆರೋಪಿಗಳಿಗೆ ಸೂಚನೆ ನೀಡಿದರು .
ದೆಹಲಿ ಪೊಲೀಸರು ಪ್ರಶಾಂತ್ ಭೂಷಣ್ ಮೇಲೆ ಹಲ್ಲೆ ನಡೆಸಿದ ದೆಹಲಿ ಶ್ರೀ ರಾಮ ಸೇನೆ ಘಟಕದ ಅಧ್ಯಕ್ಷ ಇಂದರ್ ವರ್ಮಾ , ಭಗತ್ ಸಿಂಗ್ ಕ್ರಾಂತಿ ಸೇನೆಯ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಹಾಗೂ ವಿಷ್ಣು ಗುಪ್ತಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರಾದರೂ ನ್ಯಾಯಾಲಯ ಅದನ್ನು ತಿರಸ್ಕರಿಸಿತು. ಎಲ್ಲಾ ಮೂವರು ಆರೋಪಿಗಳು ದೆಹಲಿ ನಿವಾಸಿಗಳಾಗಿದ್ದು ಅವರ ಸಮರ್ಪಕ ವಿಳಾಸ ಪಡೆಯಲಾಗಿದ್ದು ಈಗಾಗಲೇ ಆರೋಪಿಗಳು ಎರಡು ದಿನ ಪೋಲಿಸ್ ವಶದಲ್ಲಿ ಕಳೆದಿದ್ದು ಅವರ ಮೇಲೆ ದಾಖಲಿಸಿದ ಪ್ರಕರಣದ ಅನುಸಾರ ಅದಕ್ಕಿಂತ ಹೆಚ್ಚು ದಿನ ನ್ಯಾಯಾಂಗ ಬಂಧನ ವಿಧಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು .

No comments:

Post a Comment