Powered By Blogger

Sunday 13 November 2011

ಬಿ.ಸಿ ರೋಡಿನಲ್ಲಿ ಭಜರಂಗದಳ ಕಾರ್ಯಕರ್ತನಿಗೆ ಚೂರಿ ಇರಿತ , ಪರಿಸ್ಥಿತಿ ಉದ್ವಿಗ್ನ


Posted on  by ಅಶ್ರಫ್ ಮಂಜ್ರಾಬಾದ್, ಸಕಲೇಶಪುರ

ಬಂಟ್ವಾಳ : ಬಿಸಿ ರೋಡ್ ಕೈಕಂಬ ಮೂರುಕೆರೆ ಜಂಕ್ಷನ್ ಬಳಿ ಭಜರಂಗದಳದ ಕಾರ್ಯಕರ್ತನಿಗೆ ಚೂರಿಯಿಂದ ಇರಿದ ಪ್ರಕರಣ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗುರುಪುರದ ಆಟೋ  ಚಾಲಕ ರವೀಂದ್ರ (೪೫) ಎಂಬುವವರು ಕೈಕಂಬ ಜಂಕ್ಷನ್ ಬಳಿ ರಿಕ್ಷಾದಲ್ಲಿದ್ದ ಸಮಯದಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿ ಮಾರಕಾಯುಧಗಳಿಂದ ಕೊಚ್ಚಿದ್ದಾರೆ. ತೀವ್ರವಾಗಿ ಗಾಯಗೊಂಡ ರವೀಂದ್ರ ಅವರನ್ನು ಮಂಗಳೂರಿನ ಸಿಟಿ ಆಸ್ಪತ್ರೆಗೆ ಸಾಗಿಸಲಾಗಿದೆ.
ರವೀಂದ್ರ ಭಜರಂಗದಳ ಸಂಘಟನೆಯ ಕಾರ್ಯಕರ್ತರಾಗಿದ್ದರು. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಆಟೋ ಚಾಲಕರು ತಮ್ಮ ಆಟೋ ಸಂಚಾರವನ್ನು ಸ್ಥಗಿತಗೊಳಿಸಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ವ್ಯಾಪಕ ಬಂದೋಬಸ್ತ್ ಕಾರ್ಯದಲ್ಲಿ ನಿರತರಾಗಿದ್ದಾರೆ.

No comments:

Post a Comment