Posted on November 2, 2011 by ವಿಶ್ವ ಕನ್ನಡಿಗ ನ್ಯೂಸ್
![chetan_iPiccy](http://vknews.files.wordpress.com/2011/11/chetan_ipiccy.jpg?w=200&h=257)
ನಗರದಲ್ಲಿ ಈ ಪ್ರಕರಣ ಸ್ವಲ್ಪ ಮಟ್ಟಿಗಿನ ಉದ್ವಿಗ್ನ ಪರಿಸ್ಥಿತಿಯನ್ನೂ ಉಂಟುಮಾಡಿತ್ತು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಮುಸ್ತಫಾ , ಹಮೀದ್ ಸರ್ಫಾನ್ , ಮೊಹಮ್ಮದ್ ಅಜರುದ್ದೀನ್ , ಅಲ್ತಾಫ್ ಹಾಗೂ ಮಹಮ್ಮದ್ ಅಶ್ರಫ್ ಎಂಬ ಆರೋಪಿಗಳನ್ನು ಬಂಧಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಆರ್.ಎಂ. ಶೆಟ್ಟರ್ ಚೇತನ್ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೇಲೆ ಹೊರಿಸಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬ ಕಾರಣ ನೀಡಿ ಅವರನ್ನು ಖುಲಾಸೆಗೊಳಿಸಿದ್ದಾರೆ . ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಫಾರೂಕ್ ಎಂಬಾತ ತಲೆ ಮರೆಸಿಕೊಂಡಿದ್ದು ಇದುವರೆಗೂ ಪೊಲೀಸರಿಗೆ ಸಿಕ್ಕಿಲ್ಲ. ಆತ ವಿದೇಶಕ್ಕೆ ಪಾಲಾಯನ ಮಾಡಿರಬಹುದು ಎಂಬ ಶಂಕೆಯನ್ನು ಪೋಲಿಸ್ ಮೂಲಗಳು ವ್ಯಕ್ತಪಡಿಸಿದ್ದವು.